ಜಿಲ್ಲೆಗಳು

ಬಿಟ್ಟೋದ ಪತಿರಾಯ, ಇಬ್ಬರು ಮಕ್ಕಳೊಟ್ಟಿಗೆ ಗ್ರಾಪಂ ಆವರಣದಲ್ಲಿ ಮಹಿಳೆಯ ವಾಸ

ಬಿಟ್ಟು ಹೋಗಿರುವ ಪತಿ; ವೃದ್ಧ ತಂದೆಯೇ ಆಧಾರಸ್ತಂಭ
ಮದ್ದೂರು: ಕಳೆದ ೧೧ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಗ್ರಾ.ಪಂ. ಆವರಣದಲ್ಲಿ ತನ್ನಿಬ್ಬರು ಗಂಡು ಮಕ್ಕಳೊಂದಿಗೆ ವಾಸ ಮಾಡುವ ಮೂಲಕ ದಿನನಿತ್ಯದ ಜೀವನ ದೂಡುತ್ತಿರುವುದು ನೋಡುಗರ ಮನ ಕಲಕುವಂತಿದೆ.
ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದ ಗ್ರಾ.ಪಂ. ಆವರಣದಲ್ಲಿ ಕುಣಿಗಲ್ ಮೂಲದವರಾದ ಅನ್ನಪೂರ್ಣ ಮತ್ತು ಈಕೆಯ ತಂದೆ ಸುರೇಶ್ ಸೇರಿದಂತೆ ತನ್ನಿಬ್ಬರು ಮಕ್ಕಳಾದ ತನ್ಮಯ್‌ಗೌಡ (೫ ವರ್ಷ) ಅಭಯ್‌ಗೌಡ (೩ ವರ್ಷ) ಹಾಗೂ ೧೧ ದಿನಗಳ ಹಿಂದೆ ಜನಿಸಿದ ಗಂಡು ಮಗುವಿನೊಂದಿಗೆ ಗ್ರಾ.ಪಂ. ಆವರಣದಲ್ಲೇ ನೆಲೆಸಿದ್ದಾರೆ.
ಎರಡು ತಿಂಗಳ ಗರ್ಭಿಣಿಯಾಗಿದ್ದ ಅನ್ನಪೂರ್ಣ ಅವರನ್ನು ಪತಿ ಬಿಟ್ಟು ಹೋದ ಹಿನ್ನೆಲೆಯಲ್ಲಿ ವಯಸ್ಸಾದ ತಂದೆ ಸುರೇಶ್ ಅವರೇ ಆಧಾರಸ್ತಂಭವಾಗಿದ್ದು, ಬಟ್ಟೆ ವ್ಯಾಪಾರ ನಡೆಸುತ್ತಿದ್ದ ಇವರು ವ್ಯಾಪಾರದಲ್ಲಿ ನಷ್ಟ ಉಂಟಾದ ಕಾರಣ ತನ್ನ ಮಗಳು ಹಾಗೂ ಮೊಮ್ಮಕಳ ಒಪ್ಪತ್ತಿನ ಊಟಕ್ಕಾಗಿ ಅವರಿವರನ್ನು ಬೇಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ೧೧ ದಿನಗಳ ಹಿಂದೆ ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಮಗು ಜನಿಸಿದ ಬಳಿಕ ಗ್ರಾ.ಪಂ. ಆವರಣ ಸೇರಿರುವ ಹಸಿ ಬಾಣಂತಿ ಮಳೆ, ಚಳಿ ಎನ್ನದೆ ಮತ್ತು ಯಾವುದೇ ಸೌಲಭ್ಯವಿಲ್ಲದೆ ಜೀವನ ನಡೆಸುತ್ತಿರುವುದು ಮನ ಕಲಕುವಂತಿದೆ.
ಇವರ ಕುಟುಂಬಕ್ಕೆ ಪಡಿತರ ಚೀಟಿ ಸೇರಿದಂತೆ ಸರ್ಕಾರದ ಯಾವೊಂದು ಸೌಲಭ್ಯವೂ ಸಿಗದೆ ವಂಚಿತವಾಗಿದ್ದು, ಹೆಮ್ಮನಹಳ್ಳಿ ಗ್ರಾಮಸ್ಥರು ನೀಡುವ ಆಹಾರವೇ ಅವರಿಗೆ ಹೊಟ್ಟೆ ತುಂಬಿಸಿಕೊಳ್ಳುವಂತಾಗಿದೆ. ಸರ್ಕಾರ ಬಾಣಂತಿಯರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದರೂ ಸೌಲಭ್ಯದಿಂದ ದೂರವೇ ಉಳಿದಿದ್ದು, ಸ್ಥಳೀಯ ಗ್ರಾ.ಪಂ. ಹಾಗೂ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕಾಗಿದೆ.
ಗ್ರಾ.ಪಂ. ಆವರಣದಲ್ಲಿ ಸೊಳ್ಳೆಕಾಟ ಹಾಗೂ ದಿನ ನಿತ್ಯ ಸುರಿಯುತ್ತಿರುವ ಮಳೆ, ಚಳಿ ನಡುವೆಯೂ ತನ್ನ ಮೂರು ಮಕ್ಕಳೊಂದಿಗೆ ದಿನದೂಡುತ್ತಿದ್ದು, ಕೂಡಲೇ ಈಕೆಯ ನೆರವಿಗೆ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನ ಜತೆಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತುರ್ತು ಕ್ರಮವಹಿಸಬೇಕಾಗಿದೆ.


 

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ತಮ್ಮ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ನಮ್ಮ ನೆರವಿಗೆ ಧಾವಿಸುವಂತೆ ಮತ್ತು ಮಕ್ಕಳ ಶಿಕ್ಷಣ, ವಯಸ್ಸಾದ ತಂದೆಯೊAದಿಗೆ ಜೀವನ ಸಾಗಿಸಲು ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕಿದೆ.
– ಅನ್ನಪೂರ್ಣ, ನೊಂದ ಮಹಿಳೆ


ಹೆಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಹಿಳೆ ಮತ್ತು ಮಕ್ಕಳನ್ನು ದತ್ತು ಸ್ವೀಕಾರ ಕೇಂದ್ರಕ್ಕೆ ಕಳುಹಿಸಿ ಮಗುವಿನ ಹಾರೈಕೆ ಮತ್ತು ಮಕ್ಕಳ ಲಾಲನೆ ಪಾಲನೆ ಬಗ್ಗೆ ಕ್ರಮವಹಿಸಿ ಸರ್ಕಾರದ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು.
ಜಿ. ಪ್ರದೀಪ್, ಸಿಡಿಪಿಒ, ಮದ್ದೂರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

11 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

56 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago