ಜಿಲ್ಲೆಗಳು

ಬಿಟ್ಟೋದ ಪತಿರಾಯ, ಇಬ್ಬರು ಮಕ್ಕಳೊಟ್ಟಿಗೆ ಗ್ರಾಪಂ ಆವರಣದಲ್ಲಿ ಮಹಿಳೆಯ ವಾಸ

ಬಿಟ್ಟು ಹೋಗಿರುವ ಪತಿ; ವೃದ್ಧ ತಂದೆಯೇ ಆಧಾರಸ್ತಂಭ
ಮದ್ದೂರು: ಕಳೆದ ೧೧ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಗ್ರಾ.ಪಂ. ಆವರಣದಲ್ಲಿ ತನ್ನಿಬ್ಬರು ಗಂಡು ಮಕ್ಕಳೊಂದಿಗೆ ವಾಸ ಮಾಡುವ ಮೂಲಕ ದಿನನಿತ್ಯದ ಜೀವನ ದೂಡುತ್ತಿರುವುದು ನೋಡುಗರ ಮನ ಕಲಕುವಂತಿದೆ.
ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದ ಗ್ರಾ.ಪಂ. ಆವರಣದಲ್ಲಿ ಕುಣಿಗಲ್ ಮೂಲದವರಾದ ಅನ್ನಪೂರ್ಣ ಮತ್ತು ಈಕೆಯ ತಂದೆ ಸುರೇಶ್ ಸೇರಿದಂತೆ ತನ್ನಿಬ್ಬರು ಮಕ್ಕಳಾದ ತನ್ಮಯ್‌ಗೌಡ (೫ ವರ್ಷ) ಅಭಯ್‌ಗೌಡ (೩ ವರ್ಷ) ಹಾಗೂ ೧೧ ದಿನಗಳ ಹಿಂದೆ ಜನಿಸಿದ ಗಂಡು ಮಗುವಿನೊಂದಿಗೆ ಗ್ರಾ.ಪಂ. ಆವರಣದಲ್ಲೇ ನೆಲೆಸಿದ್ದಾರೆ.
ಎರಡು ತಿಂಗಳ ಗರ್ಭಿಣಿಯಾಗಿದ್ದ ಅನ್ನಪೂರ್ಣ ಅವರನ್ನು ಪತಿ ಬಿಟ್ಟು ಹೋದ ಹಿನ್ನೆಲೆಯಲ್ಲಿ ವಯಸ್ಸಾದ ತಂದೆ ಸುರೇಶ್ ಅವರೇ ಆಧಾರಸ್ತಂಭವಾಗಿದ್ದು, ಬಟ್ಟೆ ವ್ಯಾಪಾರ ನಡೆಸುತ್ತಿದ್ದ ಇವರು ವ್ಯಾಪಾರದಲ್ಲಿ ನಷ್ಟ ಉಂಟಾದ ಕಾರಣ ತನ್ನ ಮಗಳು ಹಾಗೂ ಮೊಮ್ಮಕಳ ಒಪ್ಪತ್ತಿನ ಊಟಕ್ಕಾಗಿ ಅವರಿವರನ್ನು ಬೇಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ೧೧ ದಿನಗಳ ಹಿಂದೆ ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಮಗು ಜನಿಸಿದ ಬಳಿಕ ಗ್ರಾ.ಪಂ. ಆವರಣ ಸೇರಿರುವ ಹಸಿ ಬಾಣಂತಿ ಮಳೆ, ಚಳಿ ಎನ್ನದೆ ಮತ್ತು ಯಾವುದೇ ಸೌಲಭ್ಯವಿಲ್ಲದೆ ಜೀವನ ನಡೆಸುತ್ತಿರುವುದು ಮನ ಕಲಕುವಂತಿದೆ.
ಇವರ ಕುಟುಂಬಕ್ಕೆ ಪಡಿತರ ಚೀಟಿ ಸೇರಿದಂತೆ ಸರ್ಕಾರದ ಯಾವೊಂದು ಸೌಲಭ್ಯವೂ ಸಿಗದೆ ವಂಚಿತವಾಗಿದ್ದು, ಹೆಮ್ಮನಹಳ್ಳಿ ಗ್ರಾಮಸ್ಥರು ನೀಡುವ ಆಹಾರವೇ ಅವರಿಗೆ ಹೊಟ್ಟೆ ತುಂಬಿಸಿಕೊಳ್ಳುವಂತಾಗಿದೆ. ಸರ್ಕಾರ ಬಾಣಂತಿಯರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದರೂ ಸೌಲಭ್ಯದಿಂದ ದೂರವೇ ಉಳಿದಿದ್ದು, ಸ್ಥಳೀಯ ಗ್ರಾ.ಪಂ. ಹಾಗೂ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕಾಗಿದೆ.
ಗ್ರಾ.ಪಂ. ಆವರಣದಲ್ಲಿ ಸೊಳ್ಳೆಕಾಟ ಹಾಗೂ ದಿನ ನಿತ್ಯ ಸುರಿಯುತ್ತಿರುವ ಮಳೆ, ಚಳಿ ನಡುವೆಯೂ ತನ್ನ ಮೂರು ಮಕ್ಕಳೊಂದಿಗೆ ದಿನದೂಡುತ್ತಿದ್ದು, ಕೂಡಲೇ ಈಕೆಯ ನೆರವಿಗೆ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನ ಜತೆಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತುರ್ತು ಕ್ರಮವಹಿಸಬೇಕಾಗಿದೆ.


 

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ತಮ್ಮ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ನಮ್ಮ ನೆರವಿಗೆ ಧಾವಿಸುವಂತೆ ಮತ್ತು ಮಕ್ಕಳ ಶಿಕ್ಷಣ, ವಯಸ್ಸಾದ ತಂದೆಯೊAದಿಗೆ ಜೀವನ ಸಾಗಿಸಲು ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕಿದೆ.
– ಅನ್ನಪೂರ್ಣ, ನೊಂದ ಮಹಿಳೆ


ಹೆಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಹಿಳೆ ಮತ್ತು ಮಕ್ಕಳನ್ನು ದತ್ತು ಸ್ವೀಕಾರ ಕೇಂದ್ರಕ್ಕೆ ಕಳುಹಿಸಿ ಮಗುವಿನ ಹಾರೈಕೆ ಮತ್ತು ಮಕ್ಕಳ ಲಾಲನೆ ಪಾಲನೆ ಬಗ್ಗೆ ಕ್ರಮವಹಿಸಿ ಸರ್ಕಾರದ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು.
ಜಿ. ಪ್ರದೀಪ್, ಸಿಡಿಪಿಒ, ಮದ್ದೂರು.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

4 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

4 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

6 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

6 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

6 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

6 hours ago