ಜಿಲ್ಲೆಗಳು

ಬಿಟ್ಟೋದ ಪತಿರಾಯ, ಇಬ್ಬರು ಮಕ್ಕಳೊಟ್ಟಿಗೆ ಗ್ರಾಪಂ ಆವರಣದಲ್ಲಿ ಮಹಿಳೆಯ ವಾಸ

ಬಿಟ್ಟು ಹೋಗಿರುವ ಪತಿ; ವೃದ್ಧ ತಂದೆಯೇ ಆಧಾರಸ್ತಂಭ
ಮದ್ದೂರು: ಕಳೆದ ೧೧ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಗ್ರಾ.ಪಂ. ಆವರಣದಲ್ಲಿ ತನ್ನಿಬ್ಬರು ಗಂಡು ಮಕ್ಕಳೊಂದಿಗೆ ವಾಸ ಮಾಡುವ ಮೂಲಕ ದಿನನಿತ್ಯದ ಜೀವನ ದೂಡುತ್ತಿರುವುದು ನೋಡುಗರ ಮನ ಕಲಕುವಂತಿದೆ.
ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದ ಗ್ರಾ.ಪಂ. ಆವರಣದಲ್ಲಿ ಕುಣಿಗಲ್ ಮೂಲದವರಾದ ಅನ್ನಪೂರ್ಣ ಮತ್ತು ಈಕೆಯ ತಂದೆ ಸುರೇಶ್ ಸೇರಿದಂತೆ ತನ್ನಿಬ್ಬರು ಮಕ್ಕಳಾದ ತನ್ಮಯ್‌ಗೌಡ (೫ ವರ್ಷ) ಅಭಯ್‌ಗೌಡ (೩ ವರ್ಷ) ಹಾಗೂ ೧೧ ದಿನಗಳ ಹಿಂದೆ ಜನಿಸಿದ ಗಂಡು ಮಗುವಿನೊಂದಿಗೆ ಗ್ರಾ.ಪಂ. ಆವರಣದಲ್ಲೇ ನೆಲೆಸಿದ್ದಾರೆ.
ಎರಡು ತಿಂಗಳ ಗರ್ಭಿಣಿಯಾಗಿದ್ದ ಅನ್ನಪೂರ್ಣ ಅವರನ್ನು ಪತಿ ಬಿಟ್ಟು ಹೋದ ಹಿನ್ನೆಲೆಯಲ್ಲಿ ವಯಸ್ಸಾದ ತಂದೆ ಸುರೇಶ್ ಅವರೇ ಆಧಾರಸ್ತಂಭವಾಗಿದ್ದು, ಬಟ್ಟೆ ವ್ಯಾಪಾರ ನಡೆಸುತ್ತಿದ್ದ ಇವರು ವ್ಯಾಪಾರದಲ್ಲಿ ನಷ್ಟ ಉಂಟಾದ ಕಾರಣ ತನ್ನ ಮಗಳು ಹಾಗೂ ಮೊಮ್ಮಕಳ ಒಪ್ಪತ್ತಿನ ಊಟಕ್ಕಾಗಿ ಅವರಿವರನ್ನು ಬೇಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ೧೧ ದಿನಗಳ ಹಿಂದೆ ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಮಗು ಜನಿಸಿದ ಬಳಿಕ ಗ್ರಾ.ಪಂ. ಆವರಣ ಸೇರಿರುವ ಹಸಿ ಬಾಣಂತಿ ಮಳೆ, ಚಳಿ ಎನ್ನದೆ ಮತ್ತು ಯಾವುದೇ ಸೌಲಭ್ಯವಿಲ್ಲದೆ ಜೀವನ ನಡೆಸುತ್ತಿರುವುದು ಮನ ಕಲಕುವಂತಿದೆ.
ಇವರ ಕುಟುಂಬಕ್ಕೆ ಪಡಿತರ ಚೀಟಿ ಸೇರಿದಂತೆ ಸರ್ಕಾರದ ಯಾವೊಂದು ಸೌಲಭ್ಯವೂ ಸಿಗದೆ ವಂಚಿತವಾಗಿದ್ದು, ಹೆಮ್ಮನಹಳ್ಳಿ ಗ್ರಾಮಸ್ಥರು ನೀಡುವ ಆಹಾರವೇ ಅವರಿಗೆ ಹೊಟ್ಟೆ ತುಂಬಿಸಿಕೊಳ್ಳುವಂತಾಗಿದೆ. ಸರ್ಕಾರ ಬಾಣಂತಿಯರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದರೂ ಸೌಲಭ್ಯದಿಂದ ದೂರವೇ ಉಳಿದಿದ್ದು, ಸ್ಥಳೀಯ ಗ್ರಾ.ಪಂ. ಹಾಗೂ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕಾಗಿದೆ.
ಗ್ರಾ.ಪಂ. ಆವರಣದಲ್ಲಿ ಸೊಳ್ಳೆಕಾಟ ಹಾಗೂ ದಿನ ನಿತ್ಯ ಸುರಿಯುತ್ತಿರುವ ಮಳೆ, ಚಳಿ ನಡುವೆಯೂ ತನ್ನ ಮೂರು ಮಕ್ಕಳೊಂದಿಗೆ ದಿನದೂಡುತ್ತಿದ್ದು, ಕೂಡಲೇ ಈಕೆಯ ನೆರವಿಗೆ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನ ಜತೆಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತುರ್ತು ಕ್ರಮವಹಿಸಬೇಕಾಗಿದೆ.


 

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ತಮ್ಮ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ನಮ್ಮ ನೆರವಿಗೆ ಧಾವಿಸುವಂತೆ ಮತ್ತು ಮಕ್ಕಳ ಶಿಕ್ಷಣ, ವಯಸ್ಸಾದ ತಂದೆಯೊAದಿಗೆ ಜೀವನ ಸಾಗಿಸಲು ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕಿದೆ.
– ಅನ್ನಪೂರ್ಣ, ನೊಂದ ಮಹಿಳೆ


ಹೆಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಹಿಳೆ ಮತ್ತು ಮಕ್ಕಳನ್ನು ದತ್ತು ಸ್ವೀಕಾರ ಕೇಂದ್ರಕ್ಕೆ ಕಳುಹಿಸಿ ಮಗುವಿನ ಹಾರೈಕೆ ಮತ್ತು ಮಕ್ಕಳ ಲಾಲನೆ ಪಾಲನೆ ಬಗ್ಗೆ ಕ್ರಮವಹಿಸಿ ಸರ್ಕಾರದ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು.
ಜಿ. ಪ್ರದೀಪ್, ಸಿಡಿಪಿಒ, ಮದ್ದೂರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago