ಜಿಲ್ಲೆಗಳು

ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಹಲವರು ಜೆಡಿಎಸ್‌ ಸೇರ್ಪಡೆ

ಹನೂರು: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಬಂದಿರುವ ಗ್ರಾ ಪಂ ಸದಸ್ಯರುಗಳು ಹಾಗೂ ಕಾರ್ಯಕರ್ತರುಗಳಿಗೆ ಅಭಾರಿಯಾಗಿದ್ದೇನೆ ಎಂದು ಜೆಡಿಎಸ್ ಮುಖಂಡ ಎಂಆರ್ ಮಂಜುನಾಥ್ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸೇರಿದಂತೆ ಕಾರ್ಯಕರ್ತರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದ ಮತದಾರರು ನನ್ನ ಮೇಲಿನ ವಿಶ್ವಾಸಕ್ಕೆ 44 ಸಾವಿರ ಮತ ನೀಡಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದ್ದೀರಿ, ಕ್ಷೇತ್ರದಲ್ಲಿ ನಮ್ಮ ಸಂಘಟನೆಯನ್ನು ಮೆಚ್ಚಿ ಸಾವಿರಾರು ಅನ್ಯ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪಕ್ಷ ಸೇರುತ್ತಿರುವುದರಿಂದ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ. ಮುಂದಿನ ಚುನಾವಣೆಯಲ್ಲಿ ಮತದಾರರು ನನಗೆ ಒಂದು ಅವಕಾಶ ನೀಡಿದ್ದೇ ಆದಲ್ಲಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡರೂ ನಿಮ್ಮ ಕಷ್ಟ ಸುಖಗಳಿಗೆ ಭಾಗಿಯಾಗಿದ್ದೇನೆ. ಮುಂದಿನ ದಿನಗಳಲ್ಲೂ ಸಹ ನನ್ನ ಸಹಕಾರ ಎಂದಿಗೂ ಇರುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶಿವರಾಮು,ಕಾಂಗ್ರೆಸ್ ಕಾರ್ಯಕರ್ತರು ಗಳಾದ ಮುತ್ತುರಾಜು, ತಿಮ್ಮಯ್ಯ, ಚಾಮರಾಜು, ಮಂಟೇಸ್ವಾಮಿ, ತಿಮ್ಮಣ್ಣ, ಚಿಕ್ಕಣ್ಣ, ರವಿ ಕೆಂಪರಾಜು, ಸತೀಶ್, ಕೆಂಪಣ್ಣ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳಾದ ಜಿ ಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಬಾಬು, ಮಂಜೇಶ್, ಜಸೀಂಪಾಶಾ, ಚಿನ್ನವೆಂಕಟ,ಕೆಂಪರಾಜು ಸುಂದರರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

10 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

11 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

11 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

11 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

11 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

11 hours ago