ಹನೂರು: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಬಂದಿರುವ ಗ್ರಾ ಪಂ ಸದಸ್ಯರುಗಳು ಹಾಗೂ ಕಾರ್ಯಕರ್ತರುಗಳಿಗೆ ಅಭಾರಿಯಾಗಿದ್ದೇನೆ ಎಂದು ಜೆಡಿಎಸ್ ಮುಖಂಡ ಎಂಆರ್ ಮಂಜುನಾಥ್ ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸೇರಿದಂತೆ ಕಾರ್ಯಕರ್ತರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದ ಮತದಾರರು ನನ್ನ ಮೇಲಿನ ವಿಶ್ವಾಸಕ್ಕೆ 44 ಸಾವಿರ ಮತ ನೀಡಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದ್ದೀರಿ, ಕ್ಷೇತ್ರದಲ್ಲಿ ನಮ್ಮ ಸಂಘಟನೆಯನ್ನು ಮೆಚ್ಚಿ ಸಾವಿರಾರು ಅನ್ಯ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪಕ್ಷ ಸೇರುತ್ತಿರುವುದರಿಂದ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ. ಮುಂದಿನ ಚುನಾವಣೆಯಲ್ಲಿ ಮತದಾರರು ನನಗೆ ಒಂದು ಅವಕಾಶ ನೀಡಿದ್ದೇ ಆದಲ್ಲಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡರೂ ನಿಮ್ಮ ಕಷ್ಟ ಸುಖಗಳಿಗೆ ಭಾಗಿಯಾಗಿದ್ದೇನೆ. ಮುಂದಿನ ದಿನಗಳಲ್ಲೂ ಸಹ ನನ್ನ ಸಹಕಾರ ಎಂದಿಗೂ ಇರುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶಿವರಾಮು,ಕಾಂಗ್ರೆಸ್ ಕಾರ್ಯಕರ್ತರು ಗಳಾದ ಮುತ್ತುರಾಜು, ತಿಮ್ಮಯ್ಯ, ಚಾಮರಾಜು, ಮಂಟೇಸ್ವಾಮಿ, ತಿಮ್ಮಣ್ಣ, ಚಿಕ್ಕಣ್ಣ, ರವಿ ಕೆಂಪರಾಜು, ಸತೀಶ್, ಕೆಂಪಣ್ಣ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳಾದ ಜಿ ಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಬಾಬು, ಮಂಜೇಶ್, ಜಸೀಂಪಾಶಾ, ಚಿನ್ನವೆಂಕಟ,ಕೆಂಪರಾಜು ಸುಂದರರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…