ಜಿಲ್ಲೆಗಳು

ಜನಧ್ವನಿ ಬಿ.ವೆಂಕಟೇಶ್ ನೇತೃತ್ವದಲ್ಲಿ ಗ್ರಾಪಂ ಸದಸ್ಯರು ಬಿಜೆಪಿಗೆ ಸೇರ್ಪಡೆ

ಹನೂರು : ನಮ್ಮ ಸಂಘಟನೆಯನ್ನು ಮೆಚ್ಚಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಬಿಜೆಪಿ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ಒಬಿಸಿ ಕಾರ್ಯಕಾರಿಣಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು.

ಜನದ್ವನಿ ಬಿ ವೆಂಕಟೇಶ್ ರವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಳೆದ ಒಂದು ವಾರದ ಅವಧಿಯಲ್ಲಿ ಪಿ ಜಿ ಪಾಳ್ಯ, ದೊಡ್ಡಾಲತ್ತೂರು, ಧನಗೆರೆ, ಸತ್ತೇಗಾಲ ಗ್ರಾಮಗಳ ಜೆಡಿಎಸ್, ಕಾಂಗ್ರೆಸ್, ಸ್ವತಂತ್ರ ಸದಸ್ಯರುಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಸವರಾಜ ಬೊಮ್ಮಾಯಿ ರವರ ಆಡಳಿತವನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಮುಂದಿನ ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯ 34 ಗ್ರಾಮ ಪಂಚಾಯಿತಿ ಸದಸ್ಯರುಗಳು ಬಿಜೆಪಿ ಸೇರ್ಪಡೆಯಾಗಿ ನಮ್ಮ ಕೈ ಬಲಪಡಿಸಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಕಾರ್ಯಕರ್ತರುಗಳು ಸೇರ್ಪಡೆಯಾಗುತ್ತಿದ್ದಾರೆ. ಎಂದು ಕೇಳಿದ ಮಾಧ್ಯಮದವರ ಪ್ರಶ್ನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಸೇರ್ಪಡೆಯಾಗುತ್ತಿರುವ ಕಾರ್ಯಕರ್ತರ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ತಿಳಿಸಿದ್ದೇನೆ. ಆದರೆ ಕೆಲವರು ಇದನ್ನು ತಿರುಚಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ, ನಾನು ಈಗಲೂ ನನ್ನ ಮಾತಿಗೆ ಬಂದ ದೇಶದ ಜನರಿಗೆ ಬಿಜೆಪಿ ಪಕ್ಷ ಖಂಡಿತ ಅನಿವಾರ್ಯವಾಗಿದೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಖಂಡಿತ ಕ್ಷಮೆ ಕೇಳುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಈ ಸಂದರ್ಭದಲ್ಲಿ ಜಾದಳ ಸದಸ್ಯರುಗಳಾದ ಮಂಟೇ, ಪುಷ್ಪ, ಪನ್ನಾಡಿ, ಸಿದ್ದಪ್ಪಾಜಿ ಪಾರ್ಥಿವನ್,ಲತಾ ರಾಮೇಗೌಡ, ನೂರ್ ಸ್ವಾಮಿ,ನಾಗೇಂದ್ರ, ಸುಮರಾಜ್, ಶೇಖರ್, ನಾಗರಾಜು ಕೆಂಪರಾಜು, ಕಾಂಗ್ರೆಸ್ ಸದಸ್ಯರುಗಳಾದ ಮಹೇಶ್, ಬೈರಾ, ಶಿವು, ಮಾಜಿ ಸದಸ್ಯ ನಂಜುಂಡ ಮೂರ್ತಿ,ಬಿಜೆಪಿ ಸೇರ್ಪಡೆಯಾದರು.

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

4 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

4 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

5 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

6 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

7 hours ago