ಜಿಲ್ಲೆಗಳು

ಗ್ರಾಮೀಣ ದಸರಾ ಯಶಸ್ವಿಗೆ ಜಿಟಿಡಿ ಮನವಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2022ರ ಮಹೋತ್ಸವದ ಅಂಗವಾಗಿ ಮೈಸೂರು ತಾಲ್ಲೂಕಿನಲ್ಲಿ ಗುರುವಾರದಂದು ಬೆಳಿಗ್ಗೆ 9.00 ಗಂಟೆಗೆ ದಾರಿಪುರ ಗ್ರಾಮದ ದೇವಸ್ಥಾನದಿಂದ ಸುಮಾರು 2 ಕಿ.ಮೀ. ಅದ್ಧೂರಿ ಮೆರವಣಿಗೆ ಸಾಗುವ ಮೂಲಕ ಗ್ರಾಮೀಣ ದಸರಾವನ್ನು ಹಮ್ಮಿಕೊಳ್ಳಲಾಗಿದೆ. ಈ ಗ್ರಾಮೀಣ ದಸರಾವನ್ನು ಯಶಸ್ವಿಯಾಗಿ ನಡೆಸಿಕೊಡುಬೇಕೆಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರವರು ಮನವಿ ಮಾಡಿದರು.

ದಸರಾ ಮೆರವಣಿಗೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ 25 ಟ್ಯಾಬ್ಲೂ (ಮಾಹಿತಿ ರಥ), ಹತ್ತು ಸಾಂಸ್ಕೃತಿಕ ಕಲಾ ತಂಡಗಳು, ಸುಮಾರು 3 ಸಾವಿರಕ್ಕೂ ಹೆಚ್ಚು ಜನರು, 101 ಕುಂಬಮೇಳ ಸ್ವಾಗತ ಇರಲಿದ್ದು,

ಅಂದು ಬೆಳಿಗ್ಗೆ 10.00 ಗಂಟೆಗೆ ತಾಲ್ಲೂಕಿನ ಜಯಪುರ ಗ್ರಾಮದ ಗುಜ್ಜಮ್ಮ ದೇವಸ್ಥಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್‌ ರವರು ಉದ್ಘಾಟಿಸಲಿದ್ದು, ಸಂಸದರಾದ ಪ್ರತಾಪ್‌ ಸಿಂಹ ಅವರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ

ಈ ವೇಳೆ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ಜೊತೆಗೆ ನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ನುರಿತ ವೈದ್ಯರಿಂದ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ, ಪಶುಸಂಗೋಪನೆ ಇಲಾಖೆಯಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿವಿಧ ಇಲಾಖೆಗಳಿಂದ ದೊರಕುವ ಸರ್ಕಾರಿ ಸವಲತ್ತುಗಳ ಮಾಹಿತಿ ಕೇಂದ್ರ ಇರಲಿದೆ ಎಂದು ಮಾಹಿತಿ ನೀಡುವ ಮೂಲಕ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.

andolanait

Recent Posts

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

23 mins ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

2 hours ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

2 hours ago

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ…

3 hours ago

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…

3 hours ago