ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2022ರ ಮಹೋತ್ಸವದ ಅಂಗವಾಗಿ ಮೈಸೂರು ತಾಲ್ಲೂಕಿನಲ್ಲಿ ಗುರುವಾರದಂದು ಬೆಳಿಗ್ಗೆ 9.00 ಗಂಟೆಗೆ ದಾರಿಪುರ ಗ್ರಾಮದ ದೇವಸ್ಥಾನದಿಂದ ಸುಮಾರು 2 ಕಿ.ಮೀ. ಅದ್ಧೂರಿ ಮೆರವಣಿಗೆ ಸಾಗುವ ಮೂಲಕ ಗ್ರಾಮೀಣ ದಸರಾವನ್ನು ಹಮ್ಮಿಕೊಳ್ಳಲಾಗಿದೆ. ಈ ಗ್ರಾಮೀಣ ದಸರಾವನ್ನು ಯಶಸ್ವಿಯಾಗಿ ನಡೆಸಿಕೊಡುಬೇಕೆಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರವರು ಮನವಿ ಮಾಡಿದರು.
ದಸರಾ ಮೆರವಣಿಗೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ 25 ಟ್ಯಾಬ್ಲೂ (ಮಾಹಿತಿ ರಥ), ಹತ್ತು ಸಾಂಸ್ಕೃತಿಕ ಕಲಾ ತಂಡಗಳು, ಸುಮಾರು 3 ಸಾವಿರಕ್ಕೂ ಹೆಚ್ಚು ಜನರು, 101 ಕುಂಬಮೇಳ ಸ್ವಾಗತ ಇರಲಿದ್ದು,
ಅಂದು ಬೆಳಿಗ್ಗೆ 10.00 ಗಂಟೆಗೆ ತಾಲ್ಲೂಕಿನ ಜಯಪುರ ಗ್ರಾಮದ ಗುಜ್ಜಮ್ಮ ದೇವಸ್ಥಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರು ಉದ್ಘಾಟಿಸಲಿದ್ದು, ಸಂಸದರಾದ ಪ್ರತಾಪ್ ಸಿಂಹ ಅವರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ
ಈ ವೇಳೆ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ಜೊತೆಗೆ ನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ನುರಿತ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಪಶುಸಂಗೋಪನೆ ಇಲಾಖೆಯಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿವಿಧ ಇಲಾಖೆಗಳಿಂದ ದೊರಕುವ ಸರ್ಕಾರಿ ಸವಲತ್ತುಗಳ ಮಾಹಿತಿ ಕೇಂದ್ರ ಇರಲಿದೆ ಎಂದು ಮಾಹಿತಿ ನೀಡುವ ಮೂಲಕ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…