ಜಿಲ್ಲೆಗಳು

ಅದ್ಧೂರಿ ಜಂಬೂಸವಾರಿ ಅರಮನೆ ನಗರಿ ಸಜ್ಜು

ಲಕ್ಷಾಂತರ ಪ್ರವಾಸಿಗರ ಆಗಮನದ ನಿರೀಕ್ಷೆ; ನಾಳೆ ವೈಭವದ ದಸರಾ ಕಣ್ತುಂಬಿಕೊಳ್ಳಲು ಕಾತರ

ಮೈಸೂರು: ನಾಡಿನ ಇತಿಹಾಸ, ಕಲೆ, ಸಂಸ್ಕೃತಿ, ಪರಂಪರೆ, ಪ್ರಜಾ ಸರ್ಕಾರಗಳ ಸಾಧನೆಯನ್ನು ಅನಾವರಣಗೊಳಿಸುವ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ (ಜಂಬೂಸವಾರಿ) ಮೆರವಣಿಗೆಗೆ ಅರಮನೆ ನಗರಿ ಸಂಪೂರ್ಣ ಸಜ್ಜಾಗಿದೆ. 

ದಸರಾ ಮೊದಲ ದಿನದಿಂದ ಸಡಗರ, ಸಂಭ್ರಮದಿಂದ ಕಳೆಗಟ್ಟಿರುವ ಮೈಸೂರಿನಲ್ಲಿ ಬುಧವಾರ ಜರುಗುವ ಜಂಬೂ ಸವಾರಿಯನ್ನು ಸಾಕ್ಷೀಕರಿಸಲು ಲಕ್ಷಾಂತರ ಮಂದಿ ಕುತೂಹಲದಿಂದ ಕಾಯುತ್ತಿದ್ದಾರೆ. ಎರಡು ವರ್ಷಗಳಿಂದ ಕೊರೊನಾ ಕಾರಣಕ್ಕಾಗಿ ಅರಮನೆ ಆವರಣಕ್ಕೆ ಸೀಮಿತವಾಗಿದ್ದ ಜಂಬೂಸವಾರಿ ಎಂದಿನಂತೆ ಅರಮನೆಯಿಂದ ಬನ್ನಿಮಂಟಪದ ತನಕ ಸಾಗಲಿದೆ. ಅ.೫ರಂದು ಮಧ್ಯಾಹ್ನ ೨.೩೫ರಿಂದ ೨.೫೦ರೊಳಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಜಯದಶಮಿ ಮೆರವಣಿಗೆಗೆ ನಾಂದಿ ಹಾಡುವರು.

ಸಂಜೆ ೫.೦೭ರಿಂದ ರಿಂದ ೫.೧೮ ಗಂಟೆಯೊಳಗೆ ಅರ್ಜುನ ಆನೆಯ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿರುವ ಶ್ರೀಚಾಮುಂಡೇಶ್ವರಿದೇವಿಗೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಮೆರವಣಿಗೆಯಲ್ಲಿ ೩೦ ಜಿಪಂ, ರಾಜ್ಯಮಟ್ಟದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಸೇರಿ ೪೩ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಹೆಸರಾಂತ ಕಲಾತಂಡಗಳು ಸೇರಿ ಒಟ್ಟು ೧೦೦ಕ್ಕೂ ಹೆಚ್ಚು ಜಾನಪದತಂಡಗಳು ಭಾಗವಹಿಸಲಿವೆ. ಇದರೊಂದಿಗೆ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಸೇರಿ ಇತರ ಗಜಪಡೆ, ಅಶ್ವರೋಹಿ ಪಡೆಗಳು, ಆನೆಗಾಡಿಗಳು ಪಾಲ್ಗೊಳ್ಳಲಿವೆ.

೮ಮಂದಿಗೆ ಅವಕಾಶ: ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ವೇಳೆ ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿ ಸೇರಿ ಎಂಟು ಮಂದಿ ಗಣ್ಯರಿಗೆ ಮಾತ್ರ ಅವಕಾಶವಿದೆ. ಮುಖ್ಯಮಂತ್ರಿ, ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ, ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಜಿಲ್ಲಾಧಿಕಾರಿ, ನಗರ ಪೊಲೀಸ್‌ಆಯುಕ್ತರು, ರಾಜವಂಶಸ್ಥ ಯದುವೀರ್‌ಕೃಷ್ಣದತ್ತ ಚಾವರಾಜಒಡೆಯರ್, ಮೈಸೂರಿನ ಪ್ರಥಮ ಪ್ರಜೆ ಶಿವಕುಮಾರ್ ಮಾತ್ರ ವೇದಿಕೆ ಮೇಲಿರುತ್ತಾರೆ.

ಸಂಜೆ ೭.೩೦ಕ್ಕೆ ಪಂಜಿನಕವಾಯತು: ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಪಂಜಿನ ಕವಾಯತು (ಟಾರ್ಚ್‌ಲೈಟ್ ಪೆರೇಡ್) ರಾತ್ರಿ ೭.೩೦ಗಂಟೆಗೆಆರಂಭವಾಗಲಿದೆ. ಗೌರವ ವಂದನೆ ಸ್ವೀಕರಿಸುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕೊರೊನಾ ಸೋಂಕಿಗೆ ಒಳಗಾಗಿರುವ ಕಾರಣ ಅವರ ಅಧಿಕೃತ ಕಾರ್ಯಕ್ರಮ ಈತನಕ ನಿಗಧಿಯಾಗಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್ ಸೇರಿದಂತೆ ಗಣ್ಯಾತಿಗಣ್ಯರು ಹಾಜರಿರುತ್ತಾರೆ.

ನಾಡಗೀತೆ ಬಳಿಕ ಎರಡು ಗಂಟೆಗಳ ಕಾಲ ಪಥ ಸಂಚಲನ, ಮೈನವಿರೇಳಿಸುವ ಬೈಕ್, ಅಶ್ವಾರೋಹಿ ಪಡೆಗಳ ಸಾಹಸ, ಚಮತ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಕಲ ಸಿದ್ಧತೆ ಸಿದ್ಧತೆ: ಈಗಾಗಲೇ ಜಂಬೂಸವಾರಿ ಮೆರವಣಿಗೆಗೆ ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದ ಗಜಪಡೆಯೊಂದಿಗೆ ತಾಲೀಮು ನಡೆಸಿದ್ದು, ಗಜಪಡೆ, ಅಶ್ವರೋಹಿಪಡೆಗಳು ಜನರ ಗಮನ ಸೆಳೆಯಲು ಕಾದಿವೆ. ಈಗಾಗಲೇ ಅರಮನೆ ಎದುರು ವಿಶಾಲವಾದ ಶಾಮಿಯಾನ ಹಾಕಿದ್ದು, ಗೋಲ್ಡ್‌ಕಾರ್ಡ್, ವಿವಿಐಪಿ,ವಿಐಪಿ ಪಾಸ್‌ವುಳ್ಳವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

 

 

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

12 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

13 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

13 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

14 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 hours ago