ಜಿಲ್ಲೆಗಳು

ಅದ್ಧೂರಿ ಜಂಬೂಸವಾರಿ ಅರಮನೆ ನಗರಿ ಸಜ್ಜು

ಲಕ್ಷಾಂತರ ಪ್ರವಾಸಿಗರ ಆಗಮನದ ನಿರೀಕ್ಷೆ; ನಾಳೆ ವೈಭವದ ದಸರಾ ಕಣ್ತುಂಬಿಕೊಳ್ಳಲು ಕಾತರ

ಮೈಸೂರು: ನಾಡಿನ ಇತಿಹಾಸ, ಕಲೆ, ಸಂಸ್ಕೃತಿ, ಪರಂಪರೆ, ಪ್ರಜಾ ಸರ್ಕಾರಗಳ ಸಾಧನೆಯನ್ನು ಅನಾವರಣಗೊಳಿಸುವ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ (ಜಂಬೂಸವಾರಿ) ಮೆರವಣಿಗೆಗೆ ಅರಮನೆ ನಗರಿ ಸಂಪೂರ್ಣ ಸಜ್ಜಾಗಿದೆ. 

ದಸರಾ ಮೊದಲ ದಿನದಿಂದ ಸಡಗರ, ಸಂಭ್ರಮದಿಂದ ಕಳೆಗಟ್ಟಿರುವ ಮೈಸೂರಿನಲ್ಲಿ ಬುಧವಾರ ಜರುಗುವ ಜಂಬೂ ಸವಾರಿಯನ್ನು ಸಾಕ್ಷೀಕರಿಸಲು ಲಕ್ಷಾಂತರ ಮಂದಿ ಕುತೂಹಲದಿಂದ ಕಾಯುತ್ತಿದ್ದಾರೆ. ಎರಡು ವರ್ಷಗಳಿಂದ ಕೊರೊನಾ ಕಾರಣಕ್ಕಾಗಿ ಅರಮನೆ ಆವರಣಕ್ಕೆ ಸೀಮಿತವಾಗಿದ್ದ ಜಂಬೂಸವಾರಿ ಎಂದಿನಂತೆ ಅರಮನೆಯಿಂದ ಬನ್ನಿಮಂಟಪದ ತನಕ ಸಾಗಲಿದೆ. ಅ.೫ರಂದು ಮಧ್ಯಾಹ್ನ ೨.೩೫ರಿಂದ ೨.೫೦ರೊಳಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಜಯದಶಮಿ ಮೆರವಣಿಗೆಗೆ ನಾಂದಿ ಹಾಡುವರು.

ಸಂಜೆ ೫.೦೭ರಿಂದ ರಿಂದ ೫.೧೮ ಗಂಟೆಯೊಳಗೆ ಅರ್ಜುನ ಆನೆಯ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿರುವ ಶ್ರೀಚಾಮುಂಡೇಶ್ವರಿದೇವಿಗೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಮೆರವಣಿಗೆಯಲ್ಲಿ ೩೦ ಜಿಪಂ, ರಾಜ್ಯಮಟ್ಟದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಸೇರಿ ೪೩ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಹೆಸರಾಂತ ಕಲಾತಂಡಗಳು ಸೇರಿ ಒಟ್ಟು ೧೦೦ಕ್ಕೂ ಹೆಚ್ಚು ಜಾನಪದತಂಡಗಳು ಭಾಗವಹಿಸಲಿವೆ. ಇದರೊಂದಿಗೆ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಸೇರಿ ಇತರ ಗಜಪಡೆ, ಅಶ್ವರೋಹಿ ಪಡೆಗಳು, ಆನೆಗಾಡಿಗಳು ಪಾಲ್ಗೊಳ್ಳಲಿವೆ.

೮ಮಂದಿಗೆ ಅವಕಾಶ: ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ವೇಳೆ ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿ ಸೇರಿ ಎಂಟು ಮಂದಿ ಗಣ್ಯರಿಗೆ ಮಾತ್ರ ಅವಕಾಶವಿದೆ. ಮುಖ್ಯಮಂತ್ರಿ, ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ, ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಜಿಲ್ಲಾಧಿಕಾರಿ, ನಗರ ಪೊಲೀಸ್‌ಆಯುಕ್ತರು, ರಾಜವಂಶಸ್ಥ ಯದುವೀರ್‌ಕೃಷ್ಣದತ್ತ ಚಾವರಾಜಒಡೆಯರ್, ಮೈಸೂರಿನ ಪ್ರಥಮ ಪ್ರಜೆ ಶಿವಕುಮಾರ್ ಮಾತ್ರ ವೇದಿಕೆ ಮೇಲಿರುತ್ತಾರೆ.

ಸಂಜೆ ೭.೩೦ಕ್ಕೆ ಪಂಜಿನಕವಾಯತು: ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಪಂಜಿನ ಕವಾಯತು (ಟಾರ್ಚ್‌ಲೈಟ್ ಪೆರೇಡ್) ರಾತ್ರಿ ೭.೩೦ಗಂಟೆಗೆಆರಂಭವಾಗಲಿದೆ. ಗೌರವ ವಂದನೆ ಸ್ವೀಕರಿಸುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕೊರೊನಾ ಸೋಂಕಿಗೆ ಒಳಗಾಗಿರುವ ಕಾರಣ ಅವರ ಅಧಿಕೃತ ಕಾರ್ಯಕ್ರಮ ಈತನಕ ನಿಗಧಿಯಾಗಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್ ಸೇರಿದಂತೆ ಗಣ್ಯಾತಿಗಣ್ಯರು ಹಾಜರಿರುತ್ತಾರೆ.

ನಾಡಗೀತೆ ಬಳಿಕ ಎರಡು ಗಂಟೆಗಳ ಕಾಲ ಪಥ ಸಂಚಲನ, ಮೈನವಿರೇಳಿಸುವ ಬೈಕ್, ಅಶ್ವಾರೋಹಿ ಪಡೆಗಳ ಸಾಹಸ, ಚಮತ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಕಲ ಸಿದ್ಧತೆ ಸಿದ್ಧತೆ: ಈಗಾಗಲೇ ಜಂಬೂಸವಾರಿ ಮೆರವಣಿಗೆಗೆ ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದ ಗಜಪಡೆಯೊಂದಿಗೆ ತಾಲೀಮು ನಡೆಸಿದ್ದು, ಗಜಪಡೆ, ಅಶ್ವರೋಹಿಪಡೆಗಳು ಜನರ ಗಮನ ಸೆಳೆಯಲು ಕಾದಿವೆ. ಈಗಾಗಲೇ ಅರಮನೆ ಎದುರು ವಿಶಾಲವಾದ ಶಾಮಿಯಾನ ಹಾಕಿದ್ದು, ಗೋಲ್ಡ್‌ಕಾರ್ಡ್, ವಿವಿಐಪಿ,ವಿಐಪಿ ಪಾಸ್‌ವುಳ್ಳವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

 

 

andolana

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

7 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

8 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

8 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

14 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

14 hours ago