Mysore
23
light rain

Social Media

ಗುರುವಾರ, 21 ಮೇ 2026
Light
Dark

ಉಂಡುವಾಡಿ ಯೋಜನೆಗೆ ಅನುದಾನ

ಮೈಸೂರು: ನಗರದ ಹೊರ ವಲಯದ ಸರ್ಕಾರಿ, ಖಾಸಗಿ ಬಡಾವಣೆಗಳು ಸೇರಿ ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವ ಹಳೆ ಉಂಡುವಾಡಿ ಯೋಜನೆಗೆ ಮುಡಾದಿಂದ ಕೊಡಬೇಕಿರುವ ಪಾಲಿನ ಅನುದಾನವನ್ನು (ವಂತಿಕೆ) ಹಂತ ಹಂತವಾಗಿ ಬಿಡುಗಡೆ ಮಾಡಲು ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮುಡಾ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.

ಇದಲ್ಲದೆ, ಚಾಮರಾಜ ಕ್ಷೇತ್ರದ ವ್ಯಾಪ್ತಿಗೆ ಬರುವ ಕುದುರೆ ಮಾಳದಲ್ಲಿ ರಾಜಕಾಲುವೆಯಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ಪೌರ ಕಾರ್ಮಿಕರಿಗೆ ಹತ್ತಿರದಲ್ಲೇ ಇರುವ ೧.೧೫ ಎಕರೆ ಜಾಗದಲ್ಲಿ ಮನೆಗಳನ್ನು ಕಟ್ಟಿಸಿಕೊಡಲು ಕೊಳಗೇರಿ ನಿರ್ಮೂಲನಾ ಮಂಡಳಿಗೆ ಭೂಮಿಯನ್ನು ಹಸ್ತಾಂತರಿಸಲು ತೀರ್ಮಾನಿಸಲಾಯಿತು.

ಏಕ ನಿವೇಶನ, ಬಡಾವಣೆ ರಚನೆಗಳ ಪ್ಲಾನ್‌ಗಳಿಗೆ ಸಲ್ಲಿಸಿದ್ದ ಕಡತಗಳ ಕುರಿತು ವಿಸ್ತೃತ ಚರ್ಚೆ ನಡೆದು ಕೆಲವೊಂದಕ್ಕೆ ಒಪ್ಪಿಗೆ ನೀಡಲಾಯಿತು. ತಾಂತ್ರಿಕ, ನಿವೇಶನ ಶಾಖೆ, ತುಂಡುಭೂಮಿ ವಿಷಯಗಳಿಗೆ ಒಪ್ಪಿಗೆ ನೀಡಿದರೆ, ಕೆಲವು ವಿಷಯಗಳನ್ನು ಕಾರಣಾಂತರದಿಂದ ಮುಂದೂಡಲಾಯಿತು. ಮುಡಾಕ್ಕೆ ಆದಾಯ ಬರುವಂತೆ ಮಾಡಲು ನಿವೇಶನ ಬಿಡುಗಡೆ, ಭೂ ಉಪಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!