ಜಿಲ್ಲೆಗಳು

ಉಂಡುವಾಡಿ ಯೋಜನೆಗೆ ಅನುದಾನ

ಮೈಸೂರು: ನಗರದ ಹೊರ ವಲಯದ ಸರ್ಕಾರಿ, ಖಾಸಗಿ ಬಡಾವಣೆಗಳು ಸೇರಿ ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವ ಹಳೆ ಉಂಡುವಾಡಿ ಯೋಜನೆಗೆ ಮುಡಾದಿಂದ ಕೊಡಬೇಕಿರುವ ಪಾಲಿನ ಅನುದಾನವನ್ನು (ವಂತಿಕೆ) ಹಂತ ಹಂತವಾಗಿ ಬಿಡುಗಡೆ ಮಾಡಲು ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮುಡಾ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.

ಇದಲ್ಲದೆ, ಚಾಮರಾಜ ಕ್ಷೇತ್ರದ ವ್ಯಾಪ್ತಿಗೆ ಬರುವ ಕುದುರೆ ಮಾಳದಲ್ಲಿ ರಾಜಕಾಲುವೆಯಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ಪೌರ ಕಾರ್ಮಿಕರಿಗೆ ಹತ್ತಿರದಲ್ಲೇ ಇರುವ ೧.೧೫ ಎಕರೆ ಜಾಗದಲ್ಲಿ ಮನೆಗಳನ್ನು ಕಟ್ಟಿಸಿಕೊಡಲು ಕೊಳಗೇರಿ ನಿರ್ಮೂಲನಾ ಮಂಡಳಿಗೆ ಭೂಮಿಯನ್ನು ಹಸ್ತಾಂತರಿಸಲು ತೀರ್ಮಾನಿಸಲಾಯಿತು.

ಏಕ ನಿವೇಶನ, ಬಡಾವಣೆ ರಚನೆಗಳ ಪ್ಲಾನ್‌ಗಳಿಗೆ ಸಲ್ಲಿಸಿದ್ದ ಕಡತಗಳ ಕುರಿತು ವಿಸ್ತೃತ ಚರ್ಚೆ ನಡೆದು ಕೆಲವೊಂದಕ್ಕೆ ಒಪ್ಪಿಗೆ ನೀಡಲಾಯಿತು. ತಾಂತ್ರಿಕ, ನಿವೇಶನ ಶಾಖೆ, ತುಂಡುಭೂಮಿ ವಿಷಯಗಳಿಗೆ ಒಪ್ಪಿಗೆ ನೀಡಿದರೆ, ಕೆಲವು ವಿಷಯಗಳನ್ನು ಕಾರಣಾಂತರದಿಂದ ಮುಂದೂಡಲಾಯಿತು. ಮುಡಾಕ್ಕೆ ಆದಾಯ ಬರುವಂತೆ ಮಾಡಲು ನಿವೇಶನ ಬಿಡುಗಡೆ, ಭೂ ಉಪಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ.

andolanait

Recent Posts

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

6 mins ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

14 mins ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

1 hour ago

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

1 hour ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

2 hours ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

3 hours ago