ಜಿಲ್ಲೆಗಳು

ಉಂಡುವಾಡಿ ಯೋಜನೆಗೆ ಅನುದಾನ

ಮೈಸೂರು: ನಗರದ ಹೊರ ವಲಯದ ಸರ್ಕಾರಿ, ಖಾಸಗಿ ಬಡಾವಣೆಗಳು ಸೇರಿ ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವ ಹಳೆ ಉಂಡುವಾಡಿ ಯೋಜನೆಗೆ ಮುಡಾದಿಂದ ಕೊಡಬೇಕಿರುವ ಪಾಲಿನ ಅನುದಾನವನ್ನು (ವಂತಿಕೆ) ಹಂತ ಹಂತವಾಗಿ ಬಿಡುಗಡೆ ಮಾಡಲು ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮುಡಾ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.

ಇದಲ್ಲದೆ, ಚಾಮರಾಜ ಕ್ಷೇತ್ರದ ವ್ಯಾಪ್ತಿಗೆ ಬರುವ ಕುದುರೆ ಮಾಳದಲ್ಲಿ ರಾಜಕಾಲುವೆಯಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ಪೌರ ಕಾರ್ಮಿಕರಿಗೆ ಹತ್ತಿರದಲ್ಲೇ ಇರುವ ೧.೧೫ ಎಕರೆ ಜಾಗದಲ್ಲಿ ಮನೆಗಳನ್ನು ಕಟ್ಟಿಸಿಕೊಡಲು ಕೊಳಗೇರಿ ನಿರ್ಮೂಲನಾ ಮಂಡಳಿಗೆ ಭೂಮಿಯನ್ನು ಹಸ್ತಾಂತರಿಸಲು ತೀರ್ಮಾನಿಸಲಾಯಿತು.

ಏಕ ನಿವೇಶನ, ಬಡಾವಣೆ ರಚನೆಗಳ ಪ್ಲಾನ್‌ಗಳಿಗೆ ಸಲ್ಲಿಸಿದ್ದ ಕಡತಗಳ ಕುರಿತು ವಿಸ್ತೃತ ಚರ್ಚೆ ನಡೆದು ಕೆಲವೊಂದಕ್ಕೆ ಒಪ್ಪಿಗೆ ನೀಡಲಾಯಿತು. ತಾಂತ್ರಿಕ, ನಿವೇಶನ ಶಾಖೆ, ತುಂಡುಭೂಮಿ ವಿಷಯಗಳಿಗೆ ಒಪ್ಪಿಗೆ ನೀಡಿದರೆ, ಕೆಲವು ವಿಷಯಗಳನ್ನು ಕಾರಣಾಂತರದಿಂದ ಮುಂದೂಡಲಾಯಿತು. ಮುಡಾಕ್ಕೆ ಆದಾಯ ಬರುವಂತೆ ಮಾಡಲು ನಿವೇಶನ ಬಿಡುಗಡೆ, ಭೂ ಉಪಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

32 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago