ಜಿಲ್ಲೆಗಳು

ಉಂಡುವಾಡಿ ಯೋಜನೆಗೆ ಅನುದಾನ

ಮೈಸೂರು: ನಗರದ ಹೊರ ವಲಯದ ಸರ್ಕಾರಿ, ಖಾಸಗಿ ಬಡಾವಣೆಗಳು ಸೇರಿ ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವ ಹಳೆ ಉಂಡುವಾಡಿ ಯೋಜನೆಗೆ ಮುಡಾದಿಂದ ಕೊಡಬೇಕಿರುವ ಪಾಲಿನ ಅನುದಾನವನ್ನು (ವಂತಿಕೆ) ಹಂತ ಹಂತವಾಗಿ ಬಿಡುಗಡೆ ಮಾಡಲು ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮುಡಾ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.

ಇದಲ್ಲದೆ, ಚಾಮರಾಜ ಕ್ಷೇತ್ರದ ವ್ಯಾಪ್ತಿಗೆ ಬರುವ ಕುದುರೆ ಮಾಳದಲ್ಲಿ ರಾಜಕಾಲುವೆಯಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ಪೌರ ಕಾರ್ಮಿಕರಿಗೆ ಹತ್ತಿರದಲ್ಲೇ ಇರುವ ೧.೧೫ ಎಕರೆ ಜಾಗದಲ್ಲಿ ಮನೆಗಳನ್ನು ಕಟ್ಟಿಸಿಕೊಡಲು ಕೊಳಗೇರಿ ನಿರ್ಮೂಲನಾ ಮಂಡಳಿಗೆ ಭೂಮಿಯನ್ನು ಹಸ್ತಾಂತರಿಸಲು ತೀರ್ಮಾನಿಸಲಾಯಿತು.

ಏಕ ನಿವೇಶನ, ಬಡಾವಣೆ ರಚನೆಗಳ ಪ್ಲಾನ್‌ಗಳಿಗೆ ಸಲ್ಲಿಸಿದ್ದ ಕಡತಗಳ ಕುರಿತು ವಿಸ್ತೃತ ಚರ್ಚೆ ನಡೆದು ಕೆಲವೊಂದಕ್ಕೆ ಒಪ್ಪಿಗೆ ನೀಡಲಾಯಿತು. ತಾಂತ್ರಿಕ, ನಿವೇಶನ ಶಾಖೆ, ತುಂಡುಭೂಮಿ ವಿಷಯಗಳಿಗೆ ಒಪ್ಪಿಗೆ ನೀಡಿದರೆ, ಕೆಲವು ವಿಷಯಗಳನ್ನು ಕಾರಣಾಂತರದಿಂದ ಮುಂದೂಡಲಾಯಿತು. ಮುಡಾಕ್ಕೆ ಆದಾಯ ಬರುವಂತೆ ಮಾಡಲು ನಿವೇಶನ ಬಿಡುಗಡೆ, ಭೂ ಉಪಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ.

andolanait

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

4 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

6 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

7 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

9 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

12 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

13 hours ago