ಮೈಸೂರು: ನಗರದ ಹೊರ ವಲಯದ ಸರ್ಕಾರಿ, ಖಾಸಗಿ ಬಡಾವಣೆಗಳು ಸೇರಿ ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವ ಹಳೆ ಉಂಡುವಾಡಿ ಯೋಜನೆಗೆ ಮುಡಾದಿಂದ ಕೊಡಬೇಕಿರುವ ಪಾಲಿನ ಅನುದಾನವನ್ನು (ವಂತಿಕೆ) ಹಂತ ಹಂತವಾಗಿ ಬಿಡುಗಡೆ ಮಾಡಲು ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮುಡಾ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.
ಇದಲ್ಲದೆ, ಚಾಮರಾಜ ಕ್ಷೇತ್ರದ ವ್ಯಾಪ್ತಿಗೆ ಬರುವ ಕುದುರೆ ಮಾಳದಲ್ಲಿ ರಾಜಕಾಲುವೆಯಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ಪೌರ ಕಾರ್ಮಿಕರಿಗೆ ಹತ್ತಿರದಲ್ಲೇ ಇರುವ ೧.೧೫ ಎಕರೆ ಜಾಗದಲ್ಲಿ ಮನೆಗಳನ್ನು ಕಟ್ಟಿಸಿಕೊಡಲು ಕೊಳಗೇರಿ ನಿರ್ಮೂಲನಾ ಮಂಡಳಿಗೆ ಭೂಮಿಯನ್ನು ಹಸ್ತಾಂತರಿಸಲು ತೀರ್ಮಾನಿಸಲಾಯಿತು.
ಏಕ ನಿವೇಶನ, ಬಡಾವಣೆ ರಚನೆಗಳ ಪ್ಲಾನ್ಗಳಿಗೆ ಸಲ್ಲಿಸಿದ್ದ ಕಡತಗಳ ಕುರಿತು ವಿಸ್ತೃತ ಚರ್ಚೆ ನಡೆದು ಕೆಲವೊಂದಕ್ಕೆ ಒಪ್ಪಿಗೆ ನೀಡಲಾಯಿತು. ತಾಂತ್ರಿಕ, ನಿವೇಶನ ಶಾಖೆ, ತುಂಡುಭೂಮಿ ವಿಷಯಗಳಿಗೆ ಒಪ್ಪಿಗೆ ನೀಡಿದರೆ, ಕೆಲವು ವಿಷಯಗಳನ್ನು ಕಾರಣಾಂತರದಿಂದ ಮುಂದೂಡಲಾಯಿತು. ಮುಡಾಕ್ಕೆ ಆದಾಯ ಬರುವಂತೆ ಮಾಡಲು ನಿವೇಶನ ಬಿಡುಗಡೆ, ಭೂ ಉಪಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…