ಮೈಸೂರು: ನಗರದ ಹೊರ ವಲಯದ ಸರ್ಕಾರಿ, ಖಾಸಗಿ ಬಡಾವಣೆಗಳು ಸೇರಿ ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವ ಹಳೆ ಉಂಡುವಾಡಿ ಯೋಜನೆಗೆ ಮುಡಾದಿಂದ ಕೊಡಬೇಕಿರುವ ಪಾಲಿನ ಅನುದಾನವನ್ನು (ವಂತಿಕೆ) ಹಂತ ಹಂತವಾಗಿ ಬಿಡುಗಡೆ ಮಾಡಲು ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮುಡಾ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.
ಇದಲ್ಲದೆ, ಚಾಮರಾಜ ಕ್ಷೇತ್ರದ ವ್ಯಾಪ್ತಿಗೆ ಬರುವ ಕುದುರೆ ಮಾಳದಲ್ಲಿ ರಾಜಕಾಲುವೆಯಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ಪೌರ ಕಾರ್ಮಿಕರಿಗೆ ಹತ್ತಿರದಲ್ಲೇ ಇರುವ ೧.೧೫ ಎಕರೆ ಜಾಗದಲ್ಲಿ ಮನೆಗಳನ್ನು ಕಟ್ಟಿಸಿಕೊಡಲು ಕೊಳಗೇರಿ ನಿರ್ಮೂಲನಾ ಮಂಡಳಿಗೆ ಭೂಮಿಯನ್ನು ಹಸ್ತಾಂತರಿಸಲು ತೀರ್ಮಾನಿಸಲಾಯಿತು.
ಏಕ ನಿವೇಶನ, ಬಡಾವಣೆ ರಚನೆಗಳ ಪ್ಲಾನ್ಗಳಿಗೆ ಸಲ್ಲಿಸಿದ್ದ ಕಡತಗಳ ಕುರಿತು ವಿಸ್ತೃತ ಚರ್ಚೆ ನಡೆದು ಕೆಲವೊಂದಕ್ಕೆ ಒಪ್ಪಿಗೆ ನೀಡಲಾಯಿತು. ತಾಂತ್ರಿಕ, ನಿವೇಶನ ಶಾಖೆ, ತುಂಡುಭೂಮಿ ವಿಷಯಗಳಿಗೆ ಒಪ್ಪಿಗೆ ನೀಡಿದರೆ, ಕೆಲವು ವಿಷಯಗಳನ್ನು ಕಾರಣಾಂತರದಿಂದ ಮುಂದೂಡಲಾಯಿತು. ಮುಡಾಕ್ಕೆ ಆದಾಯ ಬರುವಂತೆ ಮಾಡಲು ನಿವೇಶನ ಬಿಡುಗಡೆ, ಭೂ ಉಪಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…