ಯಳಂದೂರು :ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣಕ್ಕೆ ಮಹಿಳೆಯ ಶವವನ್ನು ಗ್ರಾ. ಪಂ ಕಚೇರಿ ಮುಂಭಾಗವೇ ಹೂತು ಹಾಕುವ ಮೂಲಕ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಗುರುವಾರ ನಡೆದಿದೆ.
ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಚಂದ್ರಮ್ಮ (48) ಎಂಬ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಮಶಾನಕ್ಕೆ ತೆರಳಲು ಕಾಲುವೆಯನ್ನು ದಾಟಿ ಹೋಗಬೇಕಿದ್ದು, ಸುವರ್ಣಾವತಿ ಜಲಾಶಯದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಅಸಾಧ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಗ್ರಾ.ಪಂ ಮುಂಭಗವೇ ಶವ ಸಂಸ್ಕಾರ ಮಾಡಿದ್ದಾರೆ.
ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರಿಗೆ ಹತ್ತಾರು ವರ್ಷಗಳಿಂದ ಮನವಿ ಮಾಡುತ್ತ ಬಂದಿದ್ದರೂ ಸೇತುವೆ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಇಂದು ಗ್ರಾ.ಪಂ ಕಚೇರಿ ಆವರಣದಲ್ಲೇ ಅಂತ್ಯಸಂಸ್ಕಾರ ನೆರವೇರಿಸಲು ಮುಂದಾಗಿದ್ದರು ಈ ಸಂದರ್ಭದಲ್ಲಿ ಸ್ಥಳಕ್ಕೆ ಎಸಿ ಗೀತಾ ಹುಡೇದ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಿಕರ ಮನ ಹೊಲಿಸಲು ವಿಫಲರಾಗಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…