ಮೈಸೂರು: ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್(ಪೇಟಾ) ಇಂಡಿಯಾದ ವತಿಯಿಂದ ದಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ದೂರು ದಾಖಲಾಗಿದೆ.
ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ(ಎಡಬ್ಲ್ಯೂಬಿಐ)ದಲ್ಲಿ ನೋಂದಾಯಿಸದ ಸರ್ಕಸ್ ಆಟಗಳನ್ನು ಪ್ರದರ್ಶಿಸಲು ನಾಯಿಗಳು ಮತ್ತು ಪಕ್ಷಿಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನಾಯಿಗಳು ರಿಂಗಿನ ಅಂಚಿನಲ್ಲಿ ತಮ್ಮ ಮುಂಭಾಗದ ಕಾಲುಗಳ ಮೇಲೆ ನಡೆಯುವಂತೆ ಮಾಡುವುದು. ಪಕ್ಷಿಗಳು ಒಂದು ಚಿಕ್ಕ ಬಂಡಿಯನ್ನು ಎಳೆಯುವಂತೆ ಮಾಡುವುದಕ್ಕೆ ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ (ಎಡಬ್ಲ್ಯೂಬಿಐ)ನಲ್ಲಿ ನೋಂದಾಯಿಸಲಾಗಿಲ್ಲ. ಹೀಗಾಗಿ, ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ಇಂಡಿಯಾ ದೂರು ದಾಖಲಿಸಿದೆ.
ಸೆಕ್ಷನ್ ೪೨೯ರ ಅಡಿಯಲ್ಲಿ ಪಕ್ಷಿಗಳನ್ನು ಅಂಗವಿಕಲಗೊಳಿಸಿದ್ದಕ್ಕಾಗಿ, ಐಪಿಸಿ ಸೆಕ್ಷನ್ 3 ಮತ್ತು 11(1)(ಎ) (ಪ್ರಾಣಿಗಳಿಗೆ ಅನಗತ್ಯ ಮತ್ತು ನೋವು ಮತ್ತು ನೋವನ್ನು ಉಂಟು ಮಾಡುವುದಕ್ಕಾಗಿ, 11(1)(ಎಲ್) (ಪಕ್ಷಿಗಳನ್ನು ವಿರೂಪಗೊಳಿಸುವುದಕ್ಕಾಗಿ), ಮತ್ತು ಸೆಕ್ಷನ್ 26 ಮತ್ತು 28 (3) ನಿಯಮ ಉಲ್ಲಂಘನೆ, ಪಿಸಿಎ 1960 ರ ನೋಂದಣಿಯಾಗದ ಸರ್ಕಸ್ ಆಟಗಳನ್ನು ಆಡಿಸುವುದು ಇವುಗಳ ಅಡಿಯಲ್ಲಿ ಪೇಟಾದ ಸಂಯೋಜಕಿ ಮುಂಬೈನ ಶಿಲ್ವಾ ಚೌಧರಿ ಅವರು ದೂರು ದಾಖಲಿಸಿದ್ದಾರೆ.
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…
ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…
ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್ವುಡ್ ಸೇರಿದಂತೆ ಎಲ್ಲಾ ವುಡ್ಗಳಲ್ಲಿಯೂ ಧುರಂಧರ್ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…
ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…