ಮೈಸೂರು: ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್(ಪೇಟಾ) ಇಂಡಿಯಾದ ವತಿಯಿಂದ ದಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ದೂರು ದಾಖಲಾಗಿದೆ.
ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ(ಎಡಬ್ಲ್ಯೂಬಿಐ)ದಲ್ಲಿ ನೋಂದಾಯಿಸದ ಸರ್ಕಸ್ ಆಟಗಳನ್ನು ಪ್ರದರ್ಶಿಸಲು ನಾಯಿಗಳು ಮತ್ತು ಪಕ್ಷಿಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನಾಯಿಗಳು ರಿಂಗಿನ ಅಂಚಿನಲ್ಲಿ ತಮ್ಮ ಮುಂಭಾಗದ ಕಾಲುಗಳ ಮೇಲೆ ನಡೆಯುವಂತೆ ಮಾಡುವುದು. ಪಕ್ಷಿಗಳು ಒಂದು ಚಿಕ್ಕ ಬಂಡಿಯನ್ನು ಎಳೆಯುವಂತೆ ಮಾಡುವುದಕ್ಕೆ ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ (ಎಡಬ್ಲ್ಯೂಬಿಐ)ನಲ್ಲಿ ನೋಂದಾಯಿಸಲಾಗಿಲ್ಲ. ಹೀಗಾಗಿ, ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ಇಂಡಿಯಾ ದೂರು ದಾಖಲಿಸಿದೆ.
ಸೆಕ್ಷನ್ ೪೨೯ರ ಅಡಿಯಲ್ಲಿ ಪಕ್ಷಿಗಳನ್ನು ಅಂಗವಿಕಲಗೊಳಿಸಿದ್ದಕ್ಕಾಗಿ, ಐಪಿಸಿ ಸೆಕ್ಷನ್ 3 ಮತ್ತು 11(1)(ಎ) (ಪ್ರಾಣಿಗಳಿಗೆ ಅನಗತ್ಯ ಮತ್ತು ನೋವು ಮತ್ತು ನೋವನ್ನು ಉಂಟು ಮಾಡುವುದಕ್ಕಾಗಿ, 11(1)(ಎಲ್) (ಪಕ್ಷಿಗಳನ್ನು ವಿರೂಪಗೊಳಿಸುವುದಕ್ಕಾಗಿ), ಮತ್ತು ಸೆಕ್ಷನ್ 26 ಮತ್ತು 28 (3) ನಿಯಮ ಉಲ್ಲಂಘನೆ, ಪಿಸಿಎ 1960 ರ ನೋಂದಣಿಯಾಗದ ಸರ್ಕಸ್ ಆಟಗಳನ್ನು ಆಡಿಸುವುದು ಇವುಗಳ ಅಡಿಯಲ್ಲಿ ಪೇಟಾದ ಸಂಯೋಜಕಿ ಮುಂಬೈನ ಶಿಲ್ವಾ ಚೌಧರಿ ಅವರು ದೂರು ದಾಖಲಿಸಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…