ಜಿಲ್ಲೆಗಳು

ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ಪೇಟಾ ದೂರು

ಮೈಸೂರು: ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್(ಪೇಟಾ) ಇಂಡಿಯಾದ ವತಿಯಿಂದ ದಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ದೂರು ದಾಖಲಾಗಿದೆ.
ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ(ಎಡಬ್ಲ್ಯೂಬಿಐ)ದಲ್ಲಿ ನೋಂದಾಯಿಸದ ಸರ್ಕಸ್ ಆಟಗಳನ್ನು ಪ್ರದರ್ಶಿಸಲು ನಾಯಿಗಳು ಮತ್ತು ಪಕ್ಷಿಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನಾಯಿಗಳು ರಿಂಗಿನ ಅಂಚಿನಲ್ಲಿ ತಮ್ಮ ಮುಂಭಾಗದ ಕಾಲುಗಳ ಮೇಲೆ ನಡೆಯುವಂತೆ ಮಾಡುವುದು. ಪಕ್ಷಿಗಳು ಒಂದು ಚಿಕ್ಕ ಬಂಡಿಯನ್ನು ಎಳೆಯುವಂತೆ ಮಾಡುವುದಕ್ಕೆ ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ (ಎಡಬ್ಲ್ಯೂಬಿಐ)ನಲ್ಲಿ ನೋಂದಾಯಿಸಲಾಗಿಲ್ಲ. ಹೀಗಾಗಿ, ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ಇಂಡಿಯಾ ದೂರು ದಾಖಲಿಸಿದೆ.
ಸೆಕ್ಷನ್ ೪೨೯ರ ಅಡಿಯಲ್ಲಿ ಪಕ್ಷಿಗಳನ್ನು ಅಂಗವಿಕಲಗೊಳಿಸಿದ್ದಕ್ಕಾಗಿ, ಐಪಿಸಿ ಸೆಕ್ಷನ್ 3 ಮತ್ತು 11(1)(ಎ) (ಪ್ರಾಣಿಗಳಿಗೆ ಅನಗತ್ಯ ಮತ್ತು ನೋವು ಮತ್ತು ನೋವನ್ನು ಉಂಟು ಮಾಡುವುದಕ್ಕಾಗಿ, 11(1)(ಎಲ್) (ಪಕ್ಷಿಗಳನ್ನು ವಿರೂಪಗೊಳಿಸುವುದಕ್ಕಾಗಿ), ಮತ್ತು ಸೆಕ್ಷನ್ 26 ಮತ್ತು 28 (3) ನಿಯಮ ಉಲ್ಲಂಘನೆ, ಪಿಸಿಎ 1960 ರ ನೋಂದಣಿಯಾಗದ ಸರ್ಕಸ್ ಆಟಗಳನ್ನು ಆಡಿಸುವುದು ಇವುಗಳ ಅಡಿಯಲ್ಲಿ ಪೇಟಾದ ಸಂಯೋಜಕಿ ಮುಂಬೈನ ಶಿಲ್ವಾ ಚೌಧರಿ ಅವರು ದೂರು ದಾಖಲಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

7 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

7 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

7 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

7 hours ago