ಜಿಲ್ಲೆಗಳು

ಸಂಸತ್‌ ಭದ್ರತಾ ಲೋಪ ಪ್ರಕರಣ: ಆನ್‌ಲೈನ್‌, ಆಫ್‌ಲೈನ್‌ ಎರಡರಲ್ಲೂ ಪ್ರತಾಪ್‌ ಸಿಂಹಗೆ ಬೆಂಬಲ

ಸಂಸತ್‌ ಭವನದ ಮೇಲೆ ದಾಳಿ ನಡೆಸಿದವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಮತ್ತೊಂದೆಡೆ ಆರೋಪಿಗಳಿಗೆ ಪಾಸ್‌ ನೀಡಿದ ಸಂಸದ ಪ್ರತಾಪ್‌ ಸಿಂಹ ಅವರನ್ನೂ ಸಹ ವಿಚಾರಣೆ ಮಾಡಬೇಕು ಹಾಗೂ ಅವರನ್ನು ಅಮಾನತ್ತು ಮಾಡಬೇಕು ಎಂಬ ಕೂಗು ಕೇಳಿಬಂದಿದೆ.

ನಿನ್ನೆ ( ಡಿಸೆಂಬರ್‌ 15 ) ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಾರ್ಯಕರ್ತರು ಪ್ರತಾಪ್‌ ಸಿಂಹ ಅವರ ಫೋಟೊವನ್ನು ಭಯೋತ್ಪಾದಕ ರೀತಿ ಎಡಿಟ್‌ ಮಾಡಿ ಬ್ಯಾನರ್‌ ಹಾಕಿ ಪ್ರತಿಭಟಿಸಿದ್ದರು. ಅಲ್ಲದೇ ದಾಳಿ ನಡೆದ ದಿನವೂ ಪ್ರತಾಪ್‌ ಸಿಂಹ ಅವರನ್ನು ದೇಶದ್ರೋಹಿ ಎಂದು ಘೋಷಣೆ ಕೂಗಿ ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರತಾಪ್‌ ಸಿಂಹ ಕಚೇರಿ ಎದುರು ಪ್ರತಿಭಟಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಇದೀಗ ಪ್ರತಾಪ್‌ ಸಿಂಹ ಅವರ ಬೆಂಬಲಿಗರು ಅವರ ಪರ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪ್ರತಾಪ್‌ ಸಿಂಹ ಕಚೇರಿ ಎದುರು ʼಪ್ರತಾಪ್‌ ಸಿಂಹ ಅವರೊಂದಿಗೆ ನಾವು, ವಿ ಸ್ಟಾಂಡ್‌ ವಿತ್‌ ಪ್ರತಾಪ್‌ ಸಿಂಹʼ ಎಂಬ ಬರಹವಿರುವ ಫ್ಲೆಕ್ಸ್‌ ಹಿಡಿದು, ಪ್ರತಾಪ್‌ ಸಿಂಹ ಅವರ ಭಾವಚಿತ್ರ ಇರುವ ಮುಖವಾಡ ಧರಿಸಿ ಬೆಂಬಲಿಸಿದ್ದಾರೆ. ಇನ್ನು ಆನ್‌ಲೈನ್‌ನಲ್ಲೂ ಸಹ ಪ್ರತಾಪ್ ಸಿಂಹ ಪರ ಹಾಗೂ ವಿರೋಧಗಳು ವ್ಯಕ್ತವಾಗುತ್ತಿದ್ದು, ಸಿಂಹ ಬೆಂಬಲಿಗರು #WeStandWithPratapSimha ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಟ್ವೀಟ್ ಮಾಡುತ್ತಿದ್ದಾರೆ. 

andolana

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

3 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago