ಜಿಲ್ಲೆಗಳು

ಸಂಸತ್‌ ಭದ್ರತಾ ಲೋಪ ಪ್ರಕರಣ: ಆನ್‌ಲೈನ್‌, ಆಫ್‌ಲೈನ್‌ ಎರಡರಲ್ಲೂ ಪ್ರತಾಪ್‌ ಸಿಂಹಗೆ ಬೆಂಬಲ

ಸಂಸತ್‌ ಭವನದ ಮೇಲೆ ದಾಳಿ ನಡೆಸಿದವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಮತ್ತೊಂದೆಡೆ ಆರೋಪಿಗಳಿಗೆ ಪಾಸ್‌ ನೀಡಿದ ಸಂಸದ ಪ್ರತಾಪ್‌ ಸಿಂಹ ಅವರನ್ನೂ ಸಹ ವಿಚಾರಣೆ ಮಾಡಬೇಕು ಹಾಗೂ ಅವರನ್ನು ಅಮಾನತ್ತು ಮಾಡಬೇಕು ಎಂಬ ಕೂಗು ಕೇಳಿಬಂದಿದೆ.

ನಿನ್ನೆ ( ಡಿಸೆಂಬರ್‌ 15 ) ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಾರ್ಯಕರ್ತರು ಪ್ರತಾಪ್‌ ಸಿಂಹ ಅವರ ಫೋಟೊವನ್ನು ಭಯೋತ್ಪಾದಕ ರೀತಿ ಎಡಿಟ್‌ ಮಾಡಿ ಬ್ಯಾನರ್‌ ಹಾಕಿ ಪ್ರತಿಭಟಿಸಿದ್ದರು. ಅಲ್ಲದೇ ದಾಳಿ ನಡೆದ ದಿನವೂ ಪ್ರತಾಪ್‌ ಸಿಂಹ ಅವರನ್ನು ದೇಶದ್ರೋಹಿ ಎಂದು ಘೋಷಣೆ ಕೂಗಿ ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರತಾಪ್‌ ಸಿಂಹ ಕಚೇರಿ ಎದುರು ಪ್ರತಿಭಟಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಇದೀಗ ಪ್ರತಾಪ್‌ ಸಿಂಹ ಅವರ ಬೆಂಬಲಿಗರು ಅವರ ಪರ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪ್ರತಾಪ್‌ ಸಿಂಹ ಕಚೇರಿ ಎದುರು ʼಪ್ರತಾಪ್‌ ಸಿಂಹ ಅವರೊಂದಿಗೆ ನಾವು, ವಿ ಸ್ಟಾಂಡ್‌ ವಿತ್‌ ಪ್ರತಾಪ್‌ ಸಿಂಹʼ ಎಂಬ ಬರಹವಿರುವ ಫ್ಲೆಕ್ಸ್‌ ಹಿಡಿದು, ಪ್ರತಾಪ್‌ ಸಿಂಹ ಅವರ ಭಾವಚಿತ್ರ ಇರುವ ಮುಖವಾಡ ಧರಿಸಿ ಬೆಂಬಲಿಸಿದ್ದಾರೆ. ಇನ್ನು ಆನ್‌ಲೈನ್‌ನಲ್ಲೂ ಸಹ ಪ್ರತಾಪ್ ಸಿಂಹ ಪರ ಹಾಗೂ ವಿರೋಧಗಳು ವ್ಯಕ್ತವಾಗುತ್ತಿದ್ದು, ಸಿಂಹ ಬೆಂಬಲಿಗರು #WeStandWithPratapSimha ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಟ್ವೀಟ್ ಮಾಡುತ್ತಿದ್ದಾರೆ. 

andolana

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

6 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

6 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

6 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

6 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

6 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

6 hours ago