ಸಂಸತ್ ಭವನದ ಮೇಲೆ ದಾಳಿ ನಡೆಸಿದವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಮತ್ತೊಂದೆಡೆ ಆರೋಪಿಗಳಿಗೆ ಪಾಸ್ ನೀಡಿದ ಸಂಸದ ಪ್ರತಾಪ್ ಸಿಂಹ ಅವರನ್ನೂ ಸಹ ವಿಚಾರಣೆ ಮಾಡಬೇಕು ಹಾಗೂ ಅವರನ್ನು ಅಮಾನತ್ತು ಮಾಡಬೇಕು ಎಂಬ ಕೂಗು ಕೇಳಿಬಂದಿದೆ.
ನಿನ್ನೆ ( ಡಿಸೆಂಬರ್ 15 ) ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಾರ್ಯಕರ್ತರು ಪ್ರತಾಪ್ ಸಿಂಹ ಅವರ ಫೋಟೊವನ್ನು ಭಯೋತ್ಪಾದಕ ರೀತಿ ಎಡಿಟ್ ಮಾಡಿ ಬ್ಯಾನರ್ ಹಾಕಿ ಪ್ರತಿಭಟಿಸಿದ್ದರು. ಅಲ್ಲದೇ ದಾಳಿ ನಡೆದ ದಿನವೂ ಪ್ರತಾಪ್ ಸಿಂಹ ಅವರನ್ನು ದೇಶದ್ರೋಹಿ ಎಂದು ಘೋಷಣೆ ಕೂಗಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ಬಳಿಕ ಇದೀಗ ಪ್ರತಾಪ್ ಸಿಂಹ ಅವರ ಬೆಂಬಲಿಗರು ಅವರ ಪರ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪ್ರತಾಪ್ ಸಿಂಹ ಕಚೇರಿ ಎದುರು ʼಪ್ರತಾಪ್ ಸಿಂಹ ಅವರೊಂದಿಗೆ ನಾವು, ವಿ ಸ್ಟಾಂಡ್ ವಿತ್ ಪ್ರತಾಪ್ ಸಿಂಹʼ ಎಂಬ ಬರಹವಿರುವ ಫ್ಲೆಕ್ಸ್ ಹಿಡಿದು, ಪ್ರತಾಪ್ ಸಿಂಹ ಅವರ ಭಾವಚಿತ್ರ ಇರುವ ಮುಖವಾಡ ಧರಿಸಿ ಬೆಂಬಲಿಸಿದ್ದಾರೆ. ಇನ್ನು ಆನ್ಲೈನ್ನಲ್ಲೂ ಸಹ ಪ್ರತಾಪ್ ಸಿಂಹ ಪರ ಹಾಗೂ ವಿರೋಧಗಳು ವ್ಯಕ್ತವಾಗುತ್ತಿದ್ದು, ಸಿಂಹ ಬೆಂಬಲಿಗರು #WeStandWithPratapSimha ಎಂಬ ಹ್ಯಾಷ್ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದಾರೆ.
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…