ಸಂಸತ್ ಭವನದ ಮೇಲೆ ದಾಳಿ ನಡೆಸಿದವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಮತ್ತೊಂದೆಡೆ ಆರೋಪಿಗಳಿಗೆ ಪಾಸ್ ನೀಡಿದ ಸಂಸದ ಪ್ರತಾಪ್ ಸಿಂಹ ಅವರನ್ನೂ ಸಹ ವಿಚಾರಣೆ ಮಾಡಬೇಕು ಹಾಗೂ ಅವರನ್ನು ಅಮಾನತ್ತು ಮಾಡಬೇಕು ಎಂಬ ಕೂಗು ಕೇಳಿಬಂದಿದೆ.
ನಿನ್ನೆ ( ಡಿಸೆಂಬರ್ 15 ) ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಾರ್ಯಕರ್ತರು ಪ್ರತಾಪ್ ಸಿಂಹ ಅವರ ಫೋಟೊವನ್ನು ಭಯೋತ್ಪಾದಕ ರೀತಿ ಎಡಿಟ್ ಮಾಡಿ ಬ್ಯಾನರ್ ಹಾಕಿ ಪ್ರತಿಭಟಿಸಿದ್ದರು. ಅಲ್ಲದೇ ದಾಳಿ ನಡೆದ ದಿನವೂ ಪ್ರತಾಪ್ ಸಿಂಹ ಅವರನ್ನು ದೇಶದ್ರೋಹಿ ಎಂದು ಘೋಷಣೆ ಕೂಗಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ಬಳಿಕ ಇದೀಗ ಪ್ರತಾಪ್ ಸಿಂಹ ಅವರ ಬೆಂಬಲಿಗರು ಅವರ ಪರ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪ್ರತಾಪ್ ಸಿಂಹ ಕಚೇರಿ ಎದುರು ʼಪ್ರತಾಪ್ ಸಿಂಹ ಅವರೊಂದಿಗೆ ನಾವು, ವಿ ಸ್ಟಾಂಡ್ ವಿತ್ ಪ್ರತಾಪ್ ಸಿಂಹʼ ಎಂಬ ಬರಹವಿರುವ ಫ್ಲೆಕ್ಸ್ ಹಿಡಿದು, ಪ್ರತಾಪ್ ಸಿಂಹ ಅವರ ಭಾವಚಿತ್ರ ಇರುವ ಮುಖವಾಡ ಧರಿಸಿ ಬೆಂಬಲಿಸಿದ್ದಾರೆ. ಇನ್ನು ಆನ್ಲೈನ್ನಲ್ಲೂ ಸಹ ಪ್ರತಾಪ್ ಸಿಂಹ ಪರ ಹಾಗೂ ವಿರೋಧಗಳು ವ್ಯಕ್ತವಾಗುತ್ತಿದ್ದು, ಸಿಂಹ ಬೆಂಬಲಿಗರು #WeStandWithPratapSimha ಎಂಬ ಹ್ಯಾಷ್ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…