ಜಿಲ್ಲೆಗಳು

ದೊಡ್ಡಗೌಡರ ಕಾಲಿಗೆ ಎರಗಿ ಕಣ್ಣೀರಿಟ್ಟ ಜಿಟಿಡಿ

ಮೈಸೂರು: ಮೂರು ವರ್ಷಗಳಿಂದ ಜಾ.ದಳದೊಂದಿಗೆ ಮುನಿಸಿಕೊಂಡು ದೂರವೇ ಉಳಿದಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅದೇ ಪಕ್ಷದಲ್ಲಿ ಉಳಿಯುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಜಿ.ಟಿ.ದೇವೇಗೌಡರನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದವು. ಪಕ್ಷದಲ್ಲೇ ಉಳಿಸಿಕೊಳ್ಳಲು ಮುಂದಾಗಿದ್ದ ಜಾ.ದಳದ ಪ್ರಯತ್ನ ಯಶಸ್ಸು ಕೊಟ್ಟಿದ್ದು, ತೀವ್ರ ರಾಜಕೀಯ ಸಂಚಲನಕ್ಕೂ ಕಾರಣವಾಗಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೇ ಅನಾರೋಗ್ಯದ ನಡುವೆಯೂ ಖುದ್ದು ಜಿ.ಟಿ.ದೇವೇಗೌಡರ ಮನೆಗೆ ಗುರುವಾರ ಆಗಮಿಸಿದ್ದರು. ಇದರಿಂದ ಭಾವುಕರಾದ ಜಿ.ಟಿ.ದೇವೇಗೌಡ ಅವರು ಕಣ್ಣೀರು ಹಾಕುತ್ತಲೇ ಜಾ.ದಳದಲ್ಲಿ ಉಳಿಯುತ್ತೇನೆ ಎಂದು ಪ್ರಕಟಿಸಿದರು. ಜಾ.ದಳವನ್ನು ಮತ್ತೆ ಅಧಿಕಾರಕ್ಕೆ ತರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಶ್ರಮಿಸುವುದಾಗಿಯೂ ತಿಳಿಸಿದರು. ಅಲ್ಲದೆ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ನನ್ನನ್ನು ಆಯಾ ಪಕ್ಷಗಳಿಗೆ ಆಹ್ವಾನಿಸಿದ್ದರು. ಉಭಯ ಪಕ್ಷಗಳ ನಾಯಕರಿಗೂ ಕ್ಷಮೆ ಕೋರುತ್ತೇನೆ ಎಂದೂ ಹೇಳಿದರು. ಮೈಸೂರಿನ ಕೂರ್ಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸೈಲೆಂಟ್ ಶೋರ್ಸ್‌ ರೆಸಾರ್ಟ್‌ನಲ್ಲಿ ಹಮ್ಮಿಕೊಂಡಿದ್ದ ಜಾ.ದಳ ಕಾರ್ಯಾಗಾರದ ಗುರುವಾರದ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಧ್ಯಾಹ್ನ 1.30ರ ಒಳಗೆ ರಾಹುಕಾಲ ಆರಂಭವಾಗುವ ಮುನ್ನ ವಿ.ವಿ.ಪುರಂನಲ್ಲಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ನಿವಾಸಕ್ಕೆ ಪುತ್ರ ಎಚ್.ಡಿ.ಕುಮಾರಸ್ವಾಮಿ, ಮೊಮ್ಮಗ ಸೂರಜ್ ರೇವಣ್ಣ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಬಂದಿಳಿಯುತ್ತಿದ್ದಂತೆ ಕುಟುಂಬದವರು ಆತ್ಮೀಯವಾಗಿ ಬರಮಾಡಿಕೊಂಡರು. ಜಿ.ಟಿ.ದೇವೇಗೌಡರ ಪತ್ನಿ ಲಲಿತಾ, ಪುತ್ರಿ ಸೇರಿ ಎಚ್.ಡಿ.ದೇವೇಗೌಡರಿಗೆ ಆರತಿ ಬೆಳಗಿ ಬರಮಾಡಿಕೊಂಡರು.

ಜಿ.ಡಿ.ಹರೀಶ್‌ಗೌಡರನ್ನು ಎಡಗಡೆ ಕೂರಿಸಿಕೊಂಡರೆ, ಬಲಗಡೆ ಮರಿಗೌಡರನ್ನು ಕೂರಿಸಿ ಅವರ ಕೈ ಹಿಡಿದುಕೊಂಡರು. ಬೆನ್ನು ಮತ್ತು ತಲೆ ಸವರಿದಾಗ ಅವರ ಕಂಗಳಲ್ಲಿ ಆನಂದಬಾಷ್ಪ ಕಾಣಿಸಿತು. ಕುಟುಂಬದವರಿಗೆ ಆಶೀರ್ವಾದ ಮಾಡಿದ ದೇವೇಗೌಡರು ಮುಂದಿನ ದಿನಗಳಲ್ಲಿ ಒಟ್ಟಿಗೆ ಹೋಗುವ ಮತ್ತು ನಿಮ್ಮದೇ ನಾಯಕತ್ವದಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಬೇಕೆಂಬ ಮಾತನ್ನು ಹೇಳಿದರು. ನಂತರ, ಜಿ.ಟಿ.ದೇವೇಗೌಡರು ದೊಡ್ಡಗೌಡರಿಗೆ ಹೂವಿನ ಹಾರ ಹಾಕಿ ಕಾಲಿಗೆ ಎರಗಿ ನಮಸ್ಕರಿಸಿದರಲ್ಲದೆ, ಕಣ್ಣೀರು ಸುರಿಸಿದರು. ಈ ವೇಳೆ ಎಚ್.ಡಿ.ದೇವೇಗೌಡರು ಭಾವುಕರಾದರಲ್ಲದೆ, ಪಕ್ಕದಲ್ಲೇ ಕೂರಿಸಿಕೊಂಡರು. ನಂತರ,ಕುಮಾರಸ್ವಾಮಿ, ಸಿ.ಎಂ.ಇಬ್ರಾಹಿಂ ಸೇರಿದಂತೆ ಅನೇಕರಿಗೆ ಶಾಲು ಹೊದಿಸಿ ಹಾರ ಹಾಕಿದರು. ಈ ವೇಳೆ ನೆರೆದಿದ್ದ ಮುಖಂಡರು ನಾಯಕರ ಪರವಾಗಿ ಘೋಷಣೆಗಳನ್ನು ಮೊಳಗಿಸಿದರು.

ಹರೀಶ್‌ ಗೌಡರಿಗೆ ಟಿಕೆಟ್‌ ಖಚಿತ

“ನನ್ನ ಮಗ, ಮೊಮ್ಮಗ ಚುನಾವಣೆಯಲ್ಲಿ ನಿಲ್ಲುವಾಗ ಜಿ.ಟಿ.ದೇವೇಗೌಡರ ಮಗ ಯಾಕೆ ನಿಲ್ಲಬಾರದು? ಈ ಪ್ರಶ್ನೆಯನ್ನು ಯಾಕೆ ಕೇಳುತ್ತೀರಾ? ಈ ಮಾತನ್ನು ನಮ್ಮನ್ನೇ ಯಾಕೆ ಕೇಳ್ತೀರಾʼʼ ಎನ್ನುವ ಮೂಲಕ ದೇವೇಗೌಡರು ಜಿಟಿಡಿ ಜತೆಗೆ ಪುತ್ರ ಹರೀಶ್‌ ಗೌಡರಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ನೀಡುವುದು ಪಕ್ಕಾ ಎನ್ನುವ ಸುಳಿವು ಮಾಡಿದರು. “ಜಿಟಿ ಅವರಿಗೆ ಈ ಭಾಗದ ನೇತೃತ್ವ ವಹಿಸುತ್ತೇವೆʼʼ ಎಂದು ಹೇಳುವ ಮೂಲಕ ನಾಯಕತ್ವದ ಗೊಂದಲವನ್ನೂ ಪರಿಹರಿಸಿದರು.

ಗೌಡರ ಕನಸು ನನಸು ಮಾಡುವೆ…

“ಮಾಜಿ ಪ್ರಧಾನಿ ದೊಡ್ಡಗೌಡರ ಪ್ರೀತಿ ಕಟ್ಟಿ ಹಾಕಿದೆ. ಮುಂದೆ ಜಾ.ದಳದಲ್ಲಿ ಉಳಿಯುತ್ತೇನೆ. ಮೂರು ವರ್ಷಗಳ ಕಾಲ ದೂರ ಇದ್ದರೂ ನನ್ನ ಬಗ್ಗೆ ಒಂದಿಷ್ಟು ಪ್ರೀತಿ ಕಡಿಮೆಯಾಗಿರಲಿಲ್ಲ. ಎಚ್.ಡಿ.ದೇವೇಗೌಡರು ಪ್ರಾದೇಶಿಕ ಪಕ್ಷ ಉಳಿಸಿದ್ದಾರೆ. ಅವರು ಕಂಡ ಕನಸು ನನಸು ಮಾಡುತ್ತೇವೆ-ʼʼ ಎನ್ನುವ ಮೂಲಕ ಜಿ.ಟಿ.ದೇವೇಗೌಡರು ಮೂರು ವರ್ಷಗಳ ತಮ್ಮ ರಾಜಕೀಯ ಗೊಂದಲಕ್ಕೆ ತೆರೆ ಎಳೆದರು

andolana

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

7 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

8 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

9 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

13 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

17 hours ago