ಜಿಲ್ಲೆಗಳು

ದೊಡ್ಡಗೌಡರ ಕಾಲಿಗೆ ಎರಗಿ ಕಣ್ಣೀರಿಟ್ಟ ಜಿಟಿಡಿ

ಮೈಸೂರು: ಮೂರು ವರ್ಷಗಳಿಂದ ಜಾ.ದಳದೊಂದಿಗೆ ಮುನಿಸಿಕೊಂಡು ದೂರವೇ ಉಳಿದಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅದೇ ಪಕ್ಷದಲ್ಲಿ ಉಳಿಯುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಜಿ.ಟಿ.ದೇವೇಗೌಡರನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದವು. ಪಕ್ಷದಲ್ಲೇ ಉಳಿಸಿಕೊಳ್ಳಲು ಮುಂದಾಗಿದ್ದ ಜಾ.ದಳದ ಪ್ರಯತ್ನ ಯಶಸ್ಸು ಕೊಟ್ಟಿದ್ದು, ತೀವ್ರ ರಾಜಕೀಯ ಸಂಚಲನಕ್ಕೂ ಕಾರಣವಾಗಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೇ ಅನಾರೋಗ್ಯದ ನಡುವೆಯೂ ಖುದ್ದು ಜಿ.ಟಿ.ದೇವೇಗೌಡರ ಮನೆಗೆ ಗುರುವಾರ ಆಗಮಿಸಿದ್ದರು. ಇದರಿಂದ ಭಾವುಕರಾದ ಜಿ.ಟಿ.ದೇವೇಗೌಡ ಅವರು ಕಣ್ಣೀರು ಹಾಕುತ್ತಲೇ ಜಾ.ದಳದಲ್ಲಿ ಉಳಿಯುತ್ತೇನೆ ಎಂದು ಪ್ರಕಟಿಸಿದರು. ಜಾ.ದಳವನ್ನು ಮತ್ತೆ ಅಧಿಕಾರಕ್ಕೆ ತರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಶ್ರಮಿಸುವುದಾಗಿಯೂ ತಿಳಿಸಿದರು. ಅಲ್ಲದೆ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ನನ್ನನ್ನು ಆಯಾ ಪಕ್ಷಗಳಿಗೆ ಆಹ್ವಾನಿಸಿದ್ದರು. ಉಭಯ ಪಕ್ಷಗಳ ನಾಯಕರಿಗೂ ಕ್ಷಮೆ ಕೋರುತ್ತೇನೆ ಎಂದೂ ಹೇಳಿದರು. ಮೈಸೂರಿನ ಕೂರ್ಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸೈಲೆಂಟ್ ಶೋರ್ಸ್‌ ರೆಸಾರ್ಟ್‌ನಲ್ಲಿ ಹಮ್ಮಿಕೊಂಡಿದ್ದ ಜಾ.ದಳ ಕಾರ್ಯಾಗಾರದ ಗುರುವಾರದ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಧ್ಯಾಹ್ನ 1.30ರ ಒಳಗೆ ರಾಹುಕಾಲ ಆರಂಭವಾಗುವ ಮುನ್ನ ವಿ.ವಿ.ಪುರಂನಲ್ಲಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ನಿವಾಸಕ್ಕೆ ಪುತ್ರ ಎಚ್.ಡಿ.ಕುಮಾರಸ್ವಾಮಿ, ಮೊಮ್ಮಗ ಸೂರಜ್ ರೇವಣ್ಣ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಬಂದಿಳಿಯುತ್ತಿದ್ದಂತೆ ಕುಟುಂಬದವರು ಆತ್ಮೀಯವಾಗಿ ಬರಮಾಡಿಕೊಂಡರು. ಜಿ.ಟಿ.ದೇವೇಗೌಡರ ಪತ್ನಿ ಲಲಿತಾ, ಪುತ್ರಿ ಸೇರಿ ಎಚ್.ಡಿ.ದೇವೇಗೌಡರಿಗೆ ಆರತಿ ಬೆಳಗಿ ಬರಮಾಡಿಕೊಂಡರು.

ಜಿ.ಡಿ.ಹರೀಶ್‌ಗೌಡರನ್ನು ಎಡಗಡೆ ಕೂರಿಸಿಕೊಂಡರೆ, ಬಲಗಡೆ ಮರಿಗೌಡರನ್ನು ಕೂರಿಸಿ ಅವರ ಕೈ ಹಿಡಿದುಕೊಂಡರು. ಬೆನ್ನು ಮತ್ತು ತಲೆ ಸವರಿದಾಗ ಅವರ ಕಂಗಳಲ್ಲಿ ಆನಂದಬಾಷ್ಪ ಕಾಣಿಸಿತು. ಕುಟುಂಬದವರಿಗೆ ಆಶೀರ್ವಾದ ಮಾಡಿದ ದೇವೇಗೌಡರು ಮುಂದಿನ ದಿನಗಳಲ್ಲಿ ಒಟ್ಟಿಗೆ ಹೋಗುವ ಮತ್ತು ನಿಮ್ಮದೇ ನಾಯಕತ್ವದಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಬೇಕೆಂಬ ಮಾತನ್ನು ಹೇಳಿದರು. ನಂತರ, ಜಿ.ಟಿ.ದೇವೇಗೌಡರು ದೊಡ್ಡಗೌಡರಿಗೆ ಹೂವಿನ ಹಾರ ಹಾಕಿ ಕಾಲಿಗೆ ಎರಗಿ ನಮಸ್ಕರಿಸಿದರಲ್ಲದೆ, ಕಣ್ಣೀರು ಸುರಿಸಿದರು. ಈ ವೇಳೆ ಎಚ್.ಡಿ.ದೇವೇಗೌಡರು ಭಾವುಕರಾದರಲ್ಲದೆ, ಪಕ್ಕದಲ್ಲೇ ಕೂರಿಸಿಕೊಂಡರು. ನಂತರ,ಕುಮಾರಸ್ವಾಮಿ, ಸಿ.ಎಂ.ಇಬ್ರಾಹಿಂ ಸೇರಿದಂತೆ ಅನೇಕರಿಗೆ ಶಾಲು ಹೊದಿಸಿ ಹಾರ ಹಾಕಿದರು. ಈ ವೇಳೆ ನೆರೆದಿದ್ದ ಮುಖಂಡರು ನಾಯಕರ ಪರವಾಗಿ ಘೋಷಣೆಗಳನ್ನು ಮೊಳಗಿಸಿದರು.

ಹರೀಶ್‌ ಗೌಡರಿಗೆ ಟಿಕೆಟ್‌ ಖಚಿತ

“ನನ್ನ ಮಗ, ಮೊಮ್ಮಗ ಚುನಾವಣೆಯಲ್ಲಿ ನಿಲ್ಲುವಾಗ ಜಿ.ಟಿ.ದೇವೇಗೌಡರ ಮಗ ಯಾಕೆ ನಿಲ್ಲಬಾರದು? ಈ ಪ್ರಶ್ನೆಯನ್ನು ಯಾಕೆ ಕೇಳುತ್ತೀರಾ? ಈ ಮಾತನ್ನು ನಮ್ಮನ್ನೇ ಯಾಕೆ ಕೇಳ್ತೀರಾʼʼ ಎನ್ನುವ ಮೂಲಕ ದೇವೇಗೌಡರು ಜಿಟಿಡಿ ಜತೆಗೆ ಪುತ್ರ ಹರೀಶ್‌ ಗೌಡರಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ನೀಡುವುದು ಪಕ್ಕಾ ಎನ್ನುವ ಸುಳಿವು ಮಾಡಿದರು. “ಜಿಟಿ ಅವರಿಗೆ ಈ ಭಾಗದ ನೇತೃತ್ವ ವಹಿಸುತ್ತೇವೆʼʼ ಎಂದು ಹೇಳುವ ಮೂಲಕ ನಾಯಕತ್ವದ ಗೊಂದಲವನ್ನೂ ಪರಿಹರಿಸಿದರು.

ಗೌಡರ ಕನಸು ನನಸು ಮಾಡುವೆ…

“ಮಾಜಿ ಪ್ರಧಾನಿ ದೊಡ್ಡಗೌಡರ ಪ್ರೀತಿ ಕಟ್ಟಿ ಹಾಕಿದೆ. ಮುಂದೆ ಜಾ.ದಳದಲ್ಲಿ ಉಳಿಯುತ್ತೇನೆ. ಮೂರು ವರ್ಷಗಳ ಕಾಲ ದೂರ ಇದ್ದರೂ ನನ್ನ ಬಗ್ಗೆ ಒಂದಿಷ್ಟು ಪ್ರೀತಿ ಕಡಿಮೆಯಾಗಿರಲಿಲ್ಲ. ಎಚ್.ಡಿ.ದೇವೇಗೌಡರು ಪ್ರಾದೇಶಿಕ ಪಕ್ಷ ಉಳಿಸಿದ್ದಾರೆ. ಅವರು ಕಂಡ ಕನಸು ನನಸು ಮಾಡುತ್ತೇವೆ-ʼʼ ಎನ್ನುವ ಮೂಲಕ ಜಿ.ಟಿ.ದೇವೇಗೌಡರು ಮೂರು ವರ್ಷಗಳ ತಮ್ಮ ರಾಜಕೀಯ ಗೊಂದಲಕ್ಕೆ ತೆರೆ ಎಳೆದರು

andolana

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

2 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

9 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

9 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

9 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

10 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

12 hours ago