Mysore
28
overcast clouds

Social Media

ಸೋಮವಾರ, 06 ಜುಲೈ 2026
Light
Dark

ಗುಜರಾತ್ ಫಲಿತಾಂಶ ಬಿಜೆಪಿಯ ಕೊನೆ ವಿಜಯೋತ್ಸವ: ಎಂಕೆಎಸ್

ಮೈಸೂರು: ಇಡೀ ದೇಶದಲ್ಲಿ ಈಗಾಗಲೇ ಬಿಜೆಪಿ ವಿರೋಧಿ ಅಲೆ ವ್ಯಾಪಿಸಿದೆ. ಮಾತಿನ ಮೋಡಿ, ಭರವಸೆಯ ಪ್ರಣಾಳಿಕೆಯಿಂದಲೇ ಅಧಿಕಾರಕ್ಕೇರಿದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಂಭ್ರಮ ಇನ್ನು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ಜನರನ್ನು ಒಂದು ಭಾರಿ ಎರಡು ಭಾರಿ ಯಾಮಾರಿಸಬಹುದು. ಆದರೆ, ಮೂರನೇ ಭಾರಿಯೂ ವಂಚಿಸಲು ಸಾಧ್ಯವಿಲ್ಲ. ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಜೋಡಿ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸಿ ಚುನಾವಣೆ ಎದುರಿಸಿದೆ. ಹಾಗಾಗಿ ಅದರ ಫಲಿತಾಂಶ ಕರ್ನಾಟಕದ ಮೇಲೆ ಎಳ್ಳಷ್ಟೂ ಪರಿಣಾಮ ಬೀರುವುದಿಲ್ಲ. ಕರ್ನಾಟಕದಲ್ಲಿ ಮುಂಬರುವ ೨೦೨೩ರ ಚುನಾವಣೆ ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಕೇವಲ ಘೋಷಣೆಗಳ ಸಮಾವೇಶಗಳನ್ನು ರೂಪಿಸಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುತ್ತಿರುವುದೇ ಬಿಜೆಪಿಯ ಹಿನ್ನೆಡೆಗೆ ಹಿಡಿದ ಕೈಗನ್ನಡಿಯಾಗಿದೆ. ಕೇಂದ್ರದ ಬಿಜೆಪಿ ಸಚಿವರು ಕರ್ನಾಟಕದಲ್ಲಿ ಬಂದು ಠಿಕಾಣಿ ಹೂಡಿದರೂ ಖಾಲಿ ಕೈಯಲ್ಲಿ ಹಿಂತಿರುಗುವುದು ಅಕ್ಷರಶಃ ಸತ್ಯ. ಇನ್ನೂ ಹಿಮಾಚಲ ಪ್ರದೇಶದ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ಸಿಗರು ಹಿಗ್ಗುವುದಿಲ್ಲ. ಬದಲಾಗಿ ಕರ್ನಾಟಕದಲ್ಲೂ ಸಿದ್ದರಾಮಯ್ಯ ನೇತೃತ್ವದ ೫ ವರ್ಷಗಳ ಯೋಜನೆಗಳನ್ನು ಮತ್ತೊಮ್ಮೆ ನೆನಪಿಸಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಾವುಟ ಹಾರಿಸಿ ಜನಸ್ನೇಹಿ ಆಡಳಿತ ನೀಡುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!