ಜಿಲ್ಲೆಗಳು

ಗುಜರಾತ್ ಫಲಿತಾಂಶ ಬಿಜೆಪಿಯ ಕೊನೆ ವಿಜಯೋತ್ಸವ: ಎಂಕೆಎಸ್

ಮೈಸೂರು: ಇಡೀ ದೇಶದಲ್ಲಿ ಈಗಾಗಲೇ ಬಿಜೆಪಿ ವಿರೋಧಿ ಅಲೆ ವ್ಯಾಪಿಸಿದೆ. ಮಾತಿನ ಮೋಡಿ, ಭರವಸೆಯ ಪ್ರಣಾಳಿಕೆಯಿಂದಲೇ ಅಧಿಕಾರಕ್ಕೇರಿದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಂಭ್ರಮ ಇನ್ನು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ಜನರನ್ನು ಒಂದು ಭಾರಿ ಎರಡು ಭಾರಿ ಯಾಮಾರಿಸಬಹುದು. ಆದರೆ, ಮೂರನೇ ಭಾರಿಯೂ ವಂಚಿಸಲು ಸಾಧ್ಯವಿಲ್ಲ. ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಜೋಡಿ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸಿ ಚುನಾವಣೆ ಎದುರಿಸಿದೆ. ಹಾಗಾಗಿ ಅದರ ಫಲಿತಾಂಶ ಕರ್ನಾಟಕದ ಮೇಲೆ ಎಳ್ಳಷ್ಟೂ ಪರಿಣಾಮ ಬೀರುವುದಿಲ್ಲ. ಕರ್ನಾಟಕದಲ್ಲಿ ಮುಂಬರುವ ೨೦೨೩ರ ಚುನಾವಣೆ ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಕೇವಲ ಘೋಷಣೆಗಳ ಸಮಾವೇಶಗಳನ್ನು ರೂಪಿಸಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುತ್ತಿರುವುದೇ ಬಿಜೆಪಿಯ ಹಿನ್ನೆಡೆಗೆ ಹಿಡಿದ ಕೈಗನ್ನಡಿಯಾಗಿದೆ. ಕೇಂದ್ರದ ಬಿಜೆಪಿ ಸಚಿವರು ಕರ್ನಾಟಕದಲ್ಲಿ ಬಂದು ಠಿಕಾಣಿ ಹೂಡಿದರೂ ಖಾಲಿ ಕೈಯಲ್ಲಿ ಹಿಂತಿರುಗುವುದು ಅಕ್ಷರಶಃ ಸತ್ಯ. ಇನ್ನೂ ಹಿಮಾಚಲ ಪ್ರದೇಶದ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ಸಿಗರು ಹಿಗ್ಗುವುದಿಲ್ಲ. ಬದಲಾಗಿ ಕರ್ನಾಟಕದಲ್ಲೂ ಸಿದ್ದರಾಮಯ್ಯ ನೇತೃತ್ವದ ೫ ವರ್ಷಗಳ ಯೋಜನೆಗಳನ್ನು ಮತ್ತೊಮ್ಮೆ ನೆನಪಿಸಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಾವುಟ ಹಾರಿಸಿ ಜನಸ್ನೇಹಿ ಆಡಳಿತ ನೀಡುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

andolana

Recent Posts

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

18 mins ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

2 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

5 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

5 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

5 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

6 hours ago