ಜಿಲ್ಲೆಗಳು

ಗುಜರಾತ್ ಫಲಿತಾಂಶ ಬಿಜೆಪಿಯ ಕೊನೆ ವಿಜಯೋತ್ಸವ: ಎಂಕೆಎಸ್

ಮೈಸೂರು: ಇಡೀ ದೇಶದಲ್ಲಿ ಈಗಾಗಲೇ ಬಿಜೆಪಿ ವಿರೋಧಿ ಅಲೆ ವ್ಯಾಪಿಸಿದೆ. ಮಾತಿನ ಮೋಡಿ, ಭರವಸೆಯ ಪ್ರಣಾಳಿಕೆಯಿಂದಲೇ ಅಧಿಕಾರಕ್ಕೇರಿದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಂಭ್ರಮ ಇನ್ನು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ಜನರನ್ನು ಒಂದು ಭಾರಿ ಎರಡು ಭಾರಿ ಯಾಮಾರಿಸಬಹುದು. ಆದರೆ, ಮೂರನೇ ಭಾರಿಯೂ ವಂಚಿಸಲು ಸಾಧ್ಯವಿಲ್ಲ. ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಜೋಡಿ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸಿ ಚುನಾವಣೆ ಎದುರಿಸಿದೆ. ಹಾಗಾಗಿ ಅದರ ಫಲಿತಾಂಶ ಕರ್ನಾಟಕದ ಮೇಲೆ ಎಳ್ಳಷ್ಟೂ ಪರಿಣಾಮ ಬೀರುವುದಿಲ್ಲ. ಕರ್ನಾಟಕದಲ್ಲಿ ಮುಂಬರುವ ೨೦೨೩ರ ಚುನಾವಣೆ ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಕೇವಲ ಘೋಷಣೆಗಳ ಸಮಾವೇಶಗಳನ್ನು ರೂಪಿಸಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುತ್ತಿರುವುದೇ ಬಿಜೆಪಿಯ ಹಿನ್ನೆಡೆಗೆ ಹಿಡಿದ ಕೈಗನ್ನಡಿಯಾಗಿದೆ. ಕೇಂದ್ರದ ಬಿಜೆಪಿ ಸಚಿವರು ಕರ್ನಾಟಕದಲ್ಲಿ ಬಂದು ಠಿಕಾಣಿ ಹೂಡಿದರೂ ಖಾಲಿ ಕೈಯಲ್ಲಿ ಹಿಂತಿರುಗುವುದು ಅಕ್ಷರಶಃ ಸತ್ಯ. ಇನ್ನೂ ಹಿಮಾಚಲ ಪ್ರದೇಶದ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ಸಿಗರು ಹಿಗ್ಗುವುದಿಲ್ಲ. ಬದಲಾಗಿ ಕರ್ನಾಟಕದಲ್ಲೂ ಸಿದ್ದರಾಮಯ್ಯ ನೇತೃತ್ವದ ೫ ವರ್ಷಗಳ ಯೋಜನೆಗಳನ್ನು ಮತ್ತೊಮ್ಮೆ ನೆನಪಿಸಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಾವುಟ ಹಾರಿಸಿ ಜನಸ್ನೇಹಿ ಆಡಳಿತ ನೀಡುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago