ಜಿಲ್ಲೆಗಳು

ಗುಜರಾತ್ ಕಮಲಮಯ ಹಿಮದಲ್ಲಿ ಕೈ ಕಮಾಲ್‌

ಬಿಜೆಪಿಗೆ ಸಿಹಿ-ಕಹಿ; ಕಾಂಗ್ರೆಸ್‌ಗೆ ಬೂಸ್ಟರ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಗೆ ತವರೂರು ಗುಜರಾತ್‌ನಲ್ಲಿ ಬಿಜೆಪಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಪ್ರಚಂಡ ಗೆಲುವು ಸಾಧಿಸಿದೆ. ಆದರೆ ಹಿಮಾಚಲಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಕಮಾಲ್ ಮಾಡಿದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದಿಗೆ ಹಿಡಿದಿದೆ.
ಗುಜರಾತ್‌ನ ಒಟ್ಟು ೧೮೨ ಸ್ಥಾನಗಳ ಪೈಕಿ ಬಿಜೆಪಿ ೧೫೬ ಸ್ಥಾನಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಕೇವಲ ೧೭ ಸ್ಥಾನಗಳಲ್ಲಿ ಜಯಗಳಿಸಿ ಹೀನಾಯ ಸೋಲು ಅನುಭವಿಸಿದೆ. ಆ ಪಕ್ಷಕ್ಕೆ ವಿಧಾನಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನವೂ ಸಿಗುವುದಿಲ್ಲ. ಮೊದಲ ಬಾರಿಗೆ ಚುನಾವಣಾ ರಂಗ ಪ್ರವೇಶ ಮಾಡಿ ಭಾರೀ ಸದ್ದು ಮಾಡಿದ್ದ ಅಮ್ ಆದ್ಮಿ ಪಕ್ಷವು ನಿರೀಕ್ಷೆಯಂತೆ ೪ ಸ್ಥಾನಗಳಲ್ಲಿ ಗೆಲುವು ಕಂಡಿದೆ.
ಗುಜರಾತ್‌ನಲ್ಲಿ ಆಡಳಿತ ವಿರೋಧಿ ಅಲೆ ಬಿಜೆಪಿ ಗೆಲುವಿಗೆ ಎಲ್ಲಿಯೂ ಅಡ್ಡಿಯಾಗಿಲ್ಲ. ಚುನಾವಣೆಗೂ ಮುನ್ನ ಅನುಸರಿಸಿದ ರಣತಂತ್ರ, ವ್ಯವಸ್ಥಿತ ಪ್ರಚಾರ, ಗುಜರಾತ್ ಅಸ್ಮಿತೆ, ಡಬಲ್ ಇಂಜಿನ್ ಸರ್ಕಾರದ ಮಹತ್ವ, ಹಿಂದುತ್ವ ಅಜೆಂಡಾ ಈ ಎಲ್ಲ ಅಂಶಗಳು ಕಮಲವನ್ನು ಅರಳಿಸಿದೆ.
೨೦೧೭ರಲ್ಲಿ ಬಿಜೆಪಿಗೆ ಭಾರೀ ಪೈಪೋಟಿ ನೀಡಿದ್ದ ಕಾಂಗ್ರೆಸ್ ಈ ಬಾರಿ ಊಹಿಸಲೂ ಅಸಾಧ್ಯವಾದ ರೀತಿಯಲ್ಲಿ ಹೀನಾಯ ಸೋಲು ಕಂಡಿದೆ. ವಿಧಾನಸಭೆ ಚುನಾವಣೆಗೂ ಮುನ್ನವೇ ಪ್ರಮುಖ ನಾಯಕರಾದ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಾಟೀಲ್ ಸೇರಿದಂತೆ ಹಲವು ನಾಯಕರ ನಿರ್ಗಮನದಿಂದ ಶಸ್ತ್ರ ತ್ಯಾಗ ಮಾಡಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಜನವಿರೋಧಿ ನೀತಿಗಳು, ಕೋಮು ಧ್ರುವೀಕರಣ, ಕೇಂದ್ರದ ತನಿಖಾ ಸಂಸ್ಥೆಗಳ ದುರುಪಯೋಗ, ತಮ್ಮನ್ನು ಕೈಹಿಡಿಯಬಹುದೆಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇತ್ತು. ಮೋದಿ ಮತ್ತು ಅಮಿತ್ ಶಾ ಜೋಡಿ ಮುಂದೆ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿದೆ.
ಹಿಮಾಚಲದಲ್ಲಿ ಬಿಜೆಪಿಗೆ ಮುಖಭಂಗ ತೀವ್ರ ಕುತೂಹಲ ಮೂಡಿಸಿದ್ದ ಗಿರಿಶಿಖರಗಳ ನಾಡು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪುಟಿದೆದ್ದು ಎಲ್ಲರ ನಿರೀಕ್ಷೆಯನ್ನು ತಲೆಕೆಳಗಾಗಿ ಮಾಡಿ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಜಯರಾಮ್ ಠಾಕೂರ್ ಅವರ ಆಡಳಿತ ವಿರೋಧಿ ಅಲೆಗೆ ಬಿಜೆಪಿ ೨ನೇ ಸ್ಥಾನಕ್ಕೆ ಕುಸಿದು ಮುಖಭಂಗ ಅನುಭವಿಸಿದೆ. ೬೮ ಸ್ಥಾನಗಳ ಪೈಕಿ ಕಾಂಗ್ರೆಸ್ ೩೯ ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿದಿದೆ.
ಆಡಳಿತದಲ್ಲಿದ್ದ ಬಿಜೆಪಿ ೨೬ ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ೩೯ ಸ್ಥಾನಗಳನ್ನು ಪಡೆದಿದೆ. ಇತರರು ೩ ಸ್ಥಾನಗಳಲ್ಲಿ ಜಯಗಳಿಸಿದ್ದು, ಎಎಪಿ ಸಾಧನೆ ಶೂನ್ಯವಾಗಿದೆ. ಕಳೆದ ಬಾರಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ೪೪, ಕಾಂಗ್ರೆಸ್ ೨೧ ಮತ್ತು ಇತರೆ ೩ ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದವು. ಕಳೆದ ೩೭ ವರ್ಷಗಳಿಂದ ಹಿಮಾಚಲಪ್ರದೇಶದಲ್ಲಿ ಒಂದು ಬಾರಿ ಆಡಳಿತ ನಡೆಸಿದ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಸಾಬೀತಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಸರಣಿ ಚುನಾವಣಾ ಸಮಾವೇಶಗಳನ್ನು ನಡೆಸಿತ್ತು.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಪಕ್ಷದ ಬಹುತೇಕ ಪ್ರಚಾರ ಸಮಾವೇಶಗಳು ನಡೆದಿವೆ. ಬಿಜೆಪಿ ಮುಷ್ಟಿಯಿಂದ ರಾಜ್ಯವನ್ನು ಪಡೆದುಕೊಳ್ಳುವುದು ಕಾಂಗ್ರೆಸ್‌ಗೆ ಅಳಿವು ಉಳಿವಿನ ಪ್ರಶ್ನೆಯಾಗಿತ್ತು.

ಗುಜರಾತ್ ಸ್ಥಾನ ೧೮೨ ಬಹುಮತಕ್ಕೆ ೯೨
ಪಕ್ಷ ೨೦೨೨ ೨೦೧೭
ಬಿಜೆಪಿ ೧೫೬ ೯೯ +೫೮
ಕಾಂಗ್ರೆಸ್ ೧೭ ೭೭ -೬೦
ಎಎಪಿ ೦೫ ೦೦ -೦೦
ಪಕ್ಷೇತರ ೦೩ ೦೬ -೦೩

ಹಿಮಾಚಲ ಪ್ರದೇಶ ಸ್ಥಾನ ೬೮ ಬಹುಮತಕ್ಕೆ ೩೫
ಪಕ್ಷ ೨೦೨೨ ೨೦೧೭
ಬಿಜೆಪಿ ೨೬ ೪೪ -೧೮
ಕಾಂಗ್ರೆಸ್ ೩೯ ೨೧ +೧೮
ಎಎಪಿ ೦೦ ೦೦ -೦೦
ಪಕ್ಷೇತರ ೦೩ ೦೬ -೦೩

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

5 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago