ಮೈಸೂರು: ಗುಜರಾತ್ ವಿಧಾನಸಭೆಯ ಚುನಾವಣೆಯ ಫಲಿತಾಂಶದಿಂದ ಮುಂಬರಲಿರುವ ಕರ್ನಾಟಕ ವಿಧಾನಸಭೆಯ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ತಿಳಿಸಿದ್ದಾರೆ. ಗುಜರಾತ್ ನಲ್ಲಿ ಪ್ರಬಲ ವಿರೋಧ ಪಕ್ಷವಾಗಿ ಮತ್ತು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾರದ ವಾತಾವರಣವನ್ನು ಸೃಷ್ಟಿಸಿ, ಕಾಂಗ್ರೆಸ್ ನಾಯಕರ ಆತ್ಮಸ್ಥೈರ್ಯವನ್ನು ಕುಗ್ಗಿಸಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆದುಕೊಂಡಿದೆ. ಪ್ರಧಾನಮಂತ್ರಿಯ ತವರೂರಾದ ಗುಜರಾತ್ ನಲ್ಲಿ ನರೇಂದ್ರ ಮೋದಿಯವರು ಜನರ ಮನಸ್ಸನ್ನು ತಲುಪಲು ಹಾಡಿದ ನಾಟಕ ಪ್ರಜಾಪ್ರಭುತ್ವವನ್ನೇ ಅಪಮಾನಿಸುವಂತಿತ್ತು ಎಂದು ವೆಂಕಟೇಶ್ ತಿಳಿಸಿದ್ದಾರೆ
ಕಾಂಗ್ರೆಸ್ ಮುಕ್ತ ಭಾರತ ಮಾಡುವುದಾಗಿ ಹೇಳುವ ಬಿಜೆಪಿಗೆ ಹಿಮಾಚಲ ಪ್ರದೇಶ ಚುನಾವಣೆ ತಕ್ಕ ಉತ್ತರ ನೀಡಿದೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಈಗಾಗಲೇ ಜನ ತಿರುಗಿ ಬಿದ್ದಿದ್ದಾರೆ. ಜನಸಂಕಲ್ಪ ಯಾತ್ರೆಯ ನೆಪದಲ್ಲಿ ನೂರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ
ಕರ್ನಾಟಕದಲ್ಲಿ ಬಿಜೆಪಿ ಹಿಂದೆಯೂ ಗೆದ್ದಿಲ್ಲ, ಮುಂದೆಯೂ ಗೆಲ್ಲುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ. ತ್ರಿಕೋನ ಸ್ಪರ್ಧೆ ಇಲ್ಲ.ವಿರೋಧ ಪಕ್ಷದ ನಾಯಕ ರಾಗಿ ಸಿದ್ದರಾಮಯ್ಯ ಅವರು ಪ್ರಜಾತಂತ್ರ ವ್ಯವಸ್ಥೆಯಲ್ಲಿ ತಮಗಿರುವ ಅಪಾರ ಅನುಭವದ ಮೂಲಕ ಸರ್ಕಾರದ ಭ್ರಷ್ಟಾಚಾರವನ್ನು, ದುರಾಡಳಿತವನ್ನು, ವೈಫಲ್ಯಗಳನ್ನು ಜನತೆಗೆ ಜಾಗೃತಿ ಮೂಡಿಸುವುದರಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯನವರ ಟೀಕೆಗಳಿಗೆ ಉತ್ತರ ಕೊಡಲು ಸಾಧ್ಯವಾಗದೇ , ಮುಖ್ಯಮಂತ್ರಿಯಾದಿಯಾಗಿ, ಇಡೀ ಸಚಿವ ಸಂಪುಟವೇ ಸಿದ್ದರಾಮಯ್ಯನವರ ವಿರುದ್ಧ ತಿರುಗಿ ಬಿದ್ದಿದೆ.ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಹಲವು ಕಾರ್ಯಕ್ರಮಗಳ ಮೂಲಕಪಕ್ಷವನ್ನು ಸಂಘಟಿಸಿದ್ದಾರೆ. ಬಿಜೆಪಿಯವರ ಜನಸಂಕಲ್ಪ ಯಾತ್ರೆಖಾಲಿ ಕುರ್ಚಿಗಳಿಗೆ ಭಾಷಣ ಮಾಡಬೇಕಾದ ಅನಿವಾರ್ಯತೆ ಬಿಜೆಪಿಗೆ ಬಂದಿದೆ ಎಂದು ತಿಳಿಸಿದ್ದಾರೆ.
ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…
ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…