ಜಿಲ್ಲೆಗಳು

ಗುಂಡ್ಲುಪೇಟೆ : ACF ಅಮಾನತ್ತಿಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ

ಗುಂಡ್ಲುಪೇಟೆ: ಅರಣ್ಯ ಇಲಾಖೆ ಕಚೇರಿಯಲ್ಲಿ ಅಂಕಹಳ್ಳಿ ಗ್ರಾಮದ ರೈತ ಉಮೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಎಫ್ ರವೀಂದ್ರ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು, ಅರಣ್ಯ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನನಿರತ ರೈತ ಮುಖಂಡರು, ಗುಂಡ್ಲುಪೇಟೆ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಅವರು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ರೈತರು ಜಮೀನಿನಲ್ಲಿ ಬೆಳೆದ ತೇಗದ ಮರ ಕಟಾವು ಹಾಗೂ ಸಾಗಾಣಿಕೆಗೆ ಅನುಮತಿ ನೀಡದೆ ಹಣದ ಆಸೆಗೆ ಮೀನಮೇಷ ಎಣಿಸುತ್ತಿದ್ದಾರೆ. ಹಲವು ಮಂದಿ ರೈತರು ಮರ ಕಟಾವಿಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದಿದ್ದರೂ ಅನುಮತಿ ನೀಡಿಲ್ಲ. ಹೀಗಿದ್ದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮರಗಳನ್ನು ಬೆಳೆಸಬೇಕು ಎಂದು ನಮಗೆ ಹೇಳುವುದೇಕೆ ಎಂದು ಕಿಡಿಕಾರಿದರು.
ಅಂಕಹಳ್ಳಿ ಗ್ರಾಮದ ರೈತ ಉಮೇಶ್ ತೇಗದ ಮರ ಸಾಗಾಣೆಗೆ ಅನುಮತಿ ಕೋರಿ ೮ ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅನುಮತಿ ನೀಡಲು ಇಲ್ಲಸಲ್ಲದ ದಾಖಲಾತಿಗಳನ್ನು ಕೇಳಿ ರೈತನನ್ನು ಅಲೆಸುವ ಕೆಲಸ ಮಾಡಿದ ಹಿನ್ನೆಲೆಯಲ್ಲಿ ರೈತ ಉಮೇಶ್ ಮನನೊಂದು ವಿಷ ಕುಡಿದು ಎಸಿಎಫ್ ಎದುರೆ ವಿಷ ಕುಡಿದಿದ್ಧಾರೆ. ಈ ಘಟನೆಗೆ ಎಸಿಎಫ್ ರವೀಂದ್ರ ಅವರೇ ಕಾರಣ. ಆದ್ದರಿಂದ ಕೂಡಲೇ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಪಟ್ಟು ಹಿಡಿದರು.

ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್ ಅವರಿಗೆ ಪ್ರತಭಟನನಿರತ ರೈತ ಮುಖಂಡರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್, ವಿಚಾರವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರೈತ ಮುಖಂಡರಾದ ಕುಂದಕೆರೆ ಸಂಪತ್ತು, ಮಾಡ್ರಹಳ್ಳಿ ಮಹದೇವಪ್ಪ, ಆಲಹಳ್ಳಿ ಮಹೇಶ್, ಬೆಟ್ಟದಮಾದಹಳ್ಳಿ ಷಣ್ಮುಖ ಸ್ವಾಮಿ, ಮಾಡ್ರಹಳ್ಳಿ ನವೀನ್, ಕಂದೇಗಾಲ ಲೋಕೇಶ್, ಮಂಜು, ಕಂದೇಗಾಲ ಮಹೇಶ್, ಕುನಗಳ್ಳಿ ಸತೀಶ್, ಮಹೇಶ್, ಸುರೇಶ್, ಬೆಟ್ಟದಮಾದಹಳ್ಳಿ ಮಂಜುನಾಥ್, ನಾಗರಾಜು, ಶಿವಯ್ಯ ಇತರರು ಹಾಜರಿದ್ದರು.

andolanait

Recent Posts

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ…

14 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

45 mins ago

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

53 mins ago

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

4 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

4 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

4 hours ago