ಜಿಲ್ಲೆಗಳು

ಗುಂಡ್ಲುಪೇಟೆ : ACF ಅಮಾನತ್ತಿಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ

ಗುಂಡ್ಲುಪೇಟೆ: ಅರಣ್ಯ ಇಲಾಖೆ ಕಚೇರಿಯಲ್ಲಿ ಅಂಕಹಳ್ಳಿ ಗ್ರಾಮದ ರೈತ ಉಮೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಎಫ್ ರವೀಂದ್ರ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು, ಅರಣ್ಯ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನನಿರತ ರೈತ ಮುಖಂಡರು, ಗುಂಡ್ಲುಪೇಟೆ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಅವರು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ರೈತರು ಜಮೀನಿನಲ್ಲಿ ಬೆಳೆದ ತೇಗದ ಮರ ಕಟಾವು ಹಾಗೂ ಸಾಗಾಣಿಕೆಗೆ ಅನುಮತಿ ನೀಡದೆ ಹಣದ ಆಸೆಗೆ ಮೀನಮೇಷ ಎಣಿಸುತ್ತಿದ್ದಾರೆ. ಹಲವು ಮಂದಿ ರೈತರು ಮರ ಕಟಾವಿಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದಿದ್ದರೂ ಅನುಮತಿ ನೀಡಿಲ್ಲ. ಹೀಗಿದ್ದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮರಗಳನ್ನು ಬೆಳೆಸಬೇಕು ಎಂದು ನಮಗೆ ಹೇಳುವುದೇಕೆ ಎಂದು ಕಿಡಿಕಾರಿದರು.
ಅಂಕಹಳ್ಳಿ ಗ್ರಾಮದ ರೈತ ಉಮೇಶ್ ತೇಗದ ಮರ ಸಾಗಾಣೆಗೆ ಅನುಮತಿ ಕೋರಿ ೮ ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅನುಮತಿ ನೀಡಲು ಇಲ್ಲಸಲ್ಲದ ದಾಖಲಾತಿಗಳನ್ನು ಕೇಳಿ ರೈತನನ್ನು ಅಲೆಸುವ ಕೆಲಸ ಮಾಡಿದ ಹಿನ್ನೆಲೆಯಲ್ಲಿ ರೈತ ಉಮೇಶ್ ಮನನೊಂದು ವಿಷ ಕುಡಿದು ಎಸಿಎಫ್ ಎದುರೆ ವಿಷ ಕುಡಿದಿದ್ಧಾರೆ. ಈ ಘಟನೆಗೆ ಎಸಿಎಫ್ ರವೀಂದ್ರ ಅವರೇ ಕಾರಣ. ಆದ್ದರಿಂದ ಕೂಡಲೇ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಪಟ್ಟು ಹಿಡಿದರು.

ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್ ಅವರಿಗೆ ಪ್ರತಭಟನನಿರತ ರೈತ ಮುಖಂಡರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್, ವಿಚಾರವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರೈತ ಮುಖಂಡರಾದ ಕುಂದಕೆರೆ ಸಂಪತ್ತು, ಮಾಡ್ರಹಳ್ಳಿ ಮಹದೇವಪ್ಪ, ಆಲಹಳ್ಳಿ ಮಹೇಶ್, ಬೆಟ್ಟದಮಾದಹಳ್ಳಿ ಷಣ್ಮುಖ ಸ್ವಾಮಿ, ಮಾಡ್ರಹಳ್ಳಿ ನವೀನ್, ಕಂದೇಗಾಲ ಲೋಕೇಶ್, ಮಂಜು, ಕಂದೇಗಾಲ ಮಹೇಶ್, ಕುನಗಳ್ಳಿ ಸತೀಶ್, ಮಹೇಶ್, ಸುರೇಶ್, ಬೆಟ್ಟದಮಾದಹಳ್ಳಿ ಮಂಜುನಾಥ್, ನಾಗರಾಜು, ಶಿವಯ್ಯ ಇತರರು ಹಾಜರಿದ್ದರು.

andolanait

Recent Posts

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

11 mins ago

ಕೃಷಿ ಪದವಿ ಪಡೆಯಲು ಸುವರ್ಣ ಅವಕಾಶ : 50% ಮೀಸಲು, ಏಪ್ರಿಲ್ 29ಕ್ಕೆ ಪ್ರಾಯೋಗಿಕ ಪರೀಕ್ಷೆ

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…

23 mins ago

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…

1 hour ago

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…

1 hour ago

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

2 hours ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

2 hours ago