ಸೋಮಣ್ಣ ಮೇಲೆ ಸುಮೋಟೋ ಕೇಸ್ ದಾಖಲಿಸಲು ಆಗ್ರಹ
ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಗ್ರಾ.ಪಂ.ನಿಂದ ನಿವೇಶನ ಹಂಚಿಕೆಯ ಕಾರ್ಯಕ್ರಮದಲ್ಲಿ ನೋವು ತೋಡಿಕೊಳ್ಳಲು ತೆರಳಿದ ಮಹಿಳೆ ಮೇಲೆ ಉಸ್ತುವಾರಿ ಸಚಿವ ಸೋಮಣ್ಣ ನವರು ಕಪಾಳಕ್ಕೆ ಹೊಡೆದಿರುವುದು ಖಂಡನೀಯ ಎಂದು ದಸಂಸ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಂಪಮ್ಮ ಅವರ ಮನೆಗೆ ಇಂದು ಭೇಟಿ ನೀಡಿದ ದಸಂಸ ಮುಖಂಡರು ಮಾತನಾಡಿ, ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ಹಾಗೂ ಜಿ.ಪಂ ಸಿಇಒ ಅವರ ಸಮ್ಮುಖದಲ್ಲಿಯೇ ಮಹಿಳೆಯ ಕಪಾಳಕ್ಕೆ ಹೊಡೆದಿರುವುದರಿಂದ ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಹಲ್ಲೆಗೊಳಗಾದ ಮಹಿಳೆುಂನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ನಡೆದಿರುವ ಸತ್ಯವನ್ನು ಹೊರತೆಗೆಯಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ, ದಲಿತ ಸಂಘರ್ಷ ಸಮಿತಿ ಸಂಚಾಲಕ ನಂಜುಂಡಸ್ವಾಮಿ, ಮಾನವ ಬಂಧುತ್ವ ವೇದಿಕೆಯ ಮಾಡ್ರಹಳ್ಳಿ ಸುಭಾಷ್, ತಾಲ್ಲೂಕು ಸಂಚಾಲಕ ಸೋಮಣ್ಣ, ಸುರೇಶ್ ಜನಶಕ್ತಿ ವೇದಿಕೆ , ಮಲ್ಲೇಶ್, ರಾಜು, ರವಿ ಮತ್ತಿತರರು ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…