ಜಿಲ್ಲೆಗಳು

ಗುಂಡ್ಲುಪೇಟೆ : ಮೈದುಂಬಿ ಆಕರ್ಷಿಸುತ್ತಿವೆ ಕೆರೆಗಳು

ಹಂಗಳ ಹಿರಿಕೆರೆ ಸೊಬಗನ್ನು ಸವಿಯಲು ಬರುತ್ತಿರುವ ಜನರ ದಂಡು

ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಸತತ ಮಳೆ ಬೀಳುತ್ತಿರುವ ಕಾರಣ ಹಂಗಳದ ಗೋಪಾಲಸ್ವಾಮಿ ಬೆಟ್ಟದಲ್ಲಿರುವ ಹಿರಿಕೆರೆ, ದೊಡ್ಡಕೆರೆ, ಬರಗಿ ಕೆರೆ, ಕೊಟೆಕೆರೆ ಕೆರೆ, ಬೇರಂಬಾಡಿ ಕೆಂಪುಸಾಗರ, ಶಿವಪುರ ಕಲ್ಕಟ್ಟ ಕೆರೆ, ಮಂಚಹಳ್ಳಿ ಕೆರೆ, ಬೆಳಚಲವಾಡಿ ಕೆರೆ ಸೇರಿದಂತೆ ತಾಲ್ಲೂಕಿನ ಅನೇಕ ಕೆರೆಗಳು ಮೈದುಂಬಿದ್ದು ಹಂಗಳ ಹಾಗೂ ಬರಗಿ ಕೆರೆ ಕೋಡಿ ಬಿದ್ದು ಹರಿಯುತ್ತಿದ್ದು ನೋಡುಗರ ಮನ ಸೆಳೆಯುತ್ತಿವೆ.
ಹಂಗಳ ಹಿರಿಕೆರೆ ಕೋಡಿಬಿದ್ದು ಝರಿಯಂತೆ ಹರಿಯುತ್ತಿದ್ದು ನೊಡುಗರನ್ನು ಆಕರ್ಷಿಸುತ್ತಿದೆ. ಪ್ರತಿನಿತ್ಯ ಪ್ರಕೃತಿ ಸೊಬಗು ಹಾಗೂ ಮೈದುಂಬಿದ ಕೆರೆಯನ್ನು ವೀಕ್ಷಿಸಲು ನೂರಾರು ಜನರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.
ಇದೇ ರೀತಿ ಮಳೆಯ ಆರ್ಭಟ ಮುಂದುವರಿದರೆ ತಾಲ್ಲೂಕಿನ ಬಹುತೇಕ ಕೆರೆ-ಕಟ್ಟೆಗಳು ತುಂಬಿ ಹರಿಯಲಿದ್ದು ಇದರಿಂದ ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಲಿದೆ. ಕುಡಿಯುವ ನೀರಿಗೆ ಹಾಗೂ ವ್ಯವಸಾಯಕ್ಕೆ ಅನುಕೂಲವಾಗಲಿದೆ. ತಾಲ್ಲೂಕಿನಲ್ಲಿ ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ನೀರು ಬರುತ್ತಿರಲಿಲ್ಲ. ಕೆಲವು ಗ್ರಾಮಗಳಲ್ಲಿ ಅಂತರ್ಜಲದ ಕೊರತೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆ ಅದನ್ನು ನಿವಾರಿಸಿದೆ.


ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇರುವ ಹಿರಿಕೆರೆ ಹಾಗೂ ದೊಡ್ಡ ಕೆರೆ ಮನಮೋಹಕವಾಗಿವೆ. ಕೆರೆಗಳು ತುಂಬಿದ ಪರಿಣಾಮ ರೈತರಿಗೆ, ಕುಡಿಯುವ ನೀರಿಗೆ ನೆರವಾಗಿದೆ. ಮುಂದಿನ ದಿನಗಳಲ್ಲಿ ಕೆರೆ ತುಂಬಿಸುವ ೋಂಜನೆ ಮೂಲಕ ಬರಗಾಲದಂತಹ ಸಮಯದಲ್ಲಿ ನೀರು ತುಂಬಿಸಿದರೆ ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗಲಿದೆ.
– ಎಚ್.ಎಂ.ನಂದೀಶ್, ಗ್ರಾ.ಪಂ ಸದಸ್ಯ ಹಾಗೂ ಪ್ರಗತಿಪರ ರೈತ


ಈ ಮೊದಲು ಬರಗಾಲವಿದ್ದಾಗ ಹಂಗಳ ಗ್ರಾಮ ದೊಡ್ಡ ಗ್ರಾಮವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಿತ್ತು. ಕೊಳವೆ ಬಾವಿಗಳು ಬರಿದಾಗಿದ್ದವು. ಇತ್ತೀಚಿನ ದಿನಗಳಲ್ಲಿ ಮಳೆಯಿಂದ ಹಂಗಳದ ಕೆರೆಗಳು ತುಂಬಿದ ಪರಿಣಾಮ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ.
-ಶಾಂತಮಲ್ಲಪ್ಪ, ಪಿಡಿಒ, ಹಂಗಳ

andolanait

Recent Posts

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

27 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

46 mins ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

1 hour ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

2 hours ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago