ಹಂಗಳ ಹಿರಿಕೆರೆ ಸೊಬಗನ್ನು ಸವಿಯಲು ಬರುತ್ತಿರುವ ಜನರ ದಂಡು
ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಸತತ ಮಳೆ ಬೀಳುತ್ತಿರುವ ಕಾರಣ ಹಂಗಳದ ಗೋಪಾಲಸ್ವಾಮಿ ಬೆಟ್ಟದಲ್ಲಿರುವ ಹಿರಿಕೆರೆ, ದೊಡ್ಡಕೆರೆ, ಬರಗಿ ಕೆರೆ, ಕೊಟೆಕೆರೆ ಕೆರೆ, ಬೇರಂಬಾಡಿ ಕೆಂಪುಸಾಗರ, ಶಿವಪುರ ಕಲ್ಕಟ್ಟ ಕೆರೆ, ಮಂಚಹಳ್ಳಿ ಕೆರೆ, ಬೆಳಚಲವಾಡಿ ಕೆರೆ ಸೇರಿದಂತೆ ತಾಲ್ಲೂಕಿನ ಅನೇಕ ಕೆರೆಗಳು ಮೈದುಂಬಿದ್ದು ಹಂಗಳ ಹಾಗೂ ಬರಗಿ ಕೆರೆ ಕೋಡಿ ಬಿದ್ದು ಹರಿಯುತ್ತಿದ್ದು ನೋಡುಗರ ಮನ ಸೆಳೆಯುತ್ತಿವೆ.
ಹಂಗಳ ಹಿರಿಕೆರೆ ಕೋಡಿಬಿದ್ದು ಝರಿಯಂತೆ ಹರಿಯುತ್ತಿದ್ದು ನೊಡುಗರನ್ನು ಆಕರ್ಷಿಸುತ್ತಿದೆ. ಪ್ರತಿನಿತ್ಯ ಪ್ರಕೃತಿ ಸೊಬಗು ಹಾಗೂ ಮೈದುಂಬಿದ ಕೆರೆಯನ್ನು ವೀಕ್ಷಿಸಲು ನೂರಾರು ಜನರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.
ಇದೇ ರೀತಿ ಮಳೆಯ ಆರ್ಭಟ ಮುಂದುವರಿದರೆ ತಾಲ್ಲೂಕಿನ ಬಹುತೇಕ ಕೆರೆ-ಕಟ್ಟೆಗಳು ತುಂಬಿ ಹರಿಯಲಿದ್ದು ಇದರಿಂದ ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಲಿದೆ. ಕುಡಿಯುವ ನೀರಿಗೆ ಹಾಗೂ ವ್ಯವಸಾಯಕ್ಕೆ ಅನುಕೂಲವಾಗಲಿದೆ. ತಾಲ್ಲೂಕಿನಲ್ಲಿ ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ನೀರು ಬರುತ್ತಿರಲಿಲ್ಲ. ಕೆಲವು ಗ್ರಾಮಗಳಲ್ಲಿ ಅಂತರ್ಜಲದ ಕೊರತೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆ ಅದನ್ನು ನಿವಾರಿಸಿದೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇರುವ ಹಿರಿಕೆರೆ ಹಾಗೂ ದೊಡ್ಡ ಕೆರೆ ಮನಮೋಹಕವಾಗಿವೆ. ಕೆರೆಗಳು ತುಂಬಿದ ಪರಿಣಾಮ ರೈತರಿಗೆ, ಕುಡಿಯುವ ನೀರಿಗೆ ನೆರವಾಗಿದೆ. ಮುಂದಿನ ದಿನಗಳಲ್ಲಿ ಕೆರೆ ತುಂಬಿಸುವ ೋಂಜನೆ ಮೂಲಕ ಬರಗಾಲದಂತಹ ಸಮಯದಲ್ಲಿ ನೀರು ತುಂಬಿಸಿದರೆ ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗಲಿದೆ.
– ಎಚ್.ಎಂ.ನಂದೀಶ್, ಗ್ರಾ.ಪಂ ಸದಸ್ಯ ಹಾಗೂ ಪ್ರಗತಿಪರ ರೈತ
ಈ ಮೊದಲು ಬರಗಾಲವಿದ್ದಾಗ ಹಂಗಳ ಗ್ರಾಮ ದೊಡ್ಡ ಗ್ರಾಮವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಿತ್ತು. ಕೊಳವೆ ಬಾವಿಗಳು ಬರಿದಾಗಿದ್ದವು. ಇತ್ತೀಚಿನ ದಿನಗಳಲ್ಲಿ ಮಳೆಯಿಂದ ಹಂಗಳದ ಕೆರೆಗಳು ತುಂಬಿದ ಪರಿಣಾಮ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ.
-ಶಾಂತಮಲ್ಲಪ್ಪ, ಪಿಡಿಒ, ಹಂಗಳ
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…