ಜಿಲ್ಲೆಗಳು

ಗುಂಡ್ಲುಪೇಟೆ : ಮೈದುಂಬಿ ಆಕರ್ಷಿಸುತ್ತಿವೆ ಕೆರೆಗಳು

ಹಂಗಳ ಹಿರಿಕೆರೆ ಸೊಬಗನ್ನು ಸವಿಯಲು ಬರುತ್ತಿರುವ ಜನರ ದಂಡು

ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಸತತ ಮಳೆ ಬೀಳುತ್ತಿರುವ ಕಾರಣ ಹಂಗಳದ ಗೋಪಾಲಸ್ವಾಮಿ ಬೆಟ್ಟದಲ್ಲಿರುವ ಹಿರಿಕೆರೆ, ದೊಡ್ಡಕೆರೆ, ಬರಗಿ ಕೆರೆ, ಕೊಟೆಕೆರೆ ಕೆರೆ, ಬೇರಂಬಾಡಿ ಕೆಂಪುಸಾಗರ, ಶಿವಪುರ ಕಲ್ಕಟ್ಟ ಕೆರೆ, ಮಂಚಹಳ್ಳಿ ಕೆರೆ, ಬೆಳಚಲವಾಡಿ ಕೆರೆ ಸೇರಿದಂತೆ ತಾಲ್ಲೂಕಿನ ಅನೇಕ ಕೆರೆಗಳು ಮೈದುಂಬಿದ್ದು ಹಂಗಳ ಹಾಗೂ ಬರಗಿ ಕೆರೆ ಕೋಡಿ ಬಿದ್ದು ಹರಿಯುತ್ತಿದ್ದು ನೋಡುಗರ ಮನ ಸೆಳೆಯುತ್ತಿವೆ.
ಹಂಗಳ ಹಿರಿಕೆರೆ ಕೋಡಿಬಿದ್ದು ಝರಿಯಂತೆ ಹರಿಯುತ್ತಿದ್ದು ನೊಡುಗರನ್ನು ಆಕರ್ಷಿಸುತ್ತಿದೆ. ಪ್ರತಿನಿತ್ಯ ಪ್ರಕೃತಿ ಸೊಬಗು ಹಾಗೂ ಮೈದುಂಬಿದ ಕೆರೆಯನ್ನು ವೀಕ್ಷಿಸಲು ನೂರಾರು ಜನರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.
ಇದೇ ರೀತಿ ಮಳೆಯ ಆರ್ಭಟ ಮುಂದುವರಿದರೆ ತಾಲ್ಲೂಕಿನ ಬಹುತೇಕ ಕೆರೆ-ಕಟ್ಟೆಗಳು ತುಂಬಿ ಹರಿಯಲಿದ್ದು ಇದರಿಂದ ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಲಿದೆ. ಕುಡಿಯುವ ನೀರಿಗೆ ಹಾಗೂ ವ್ಯವಸಾಯಕ್ಕೆ ಅನುಕೂಲವಾಗಲಿದೆ. ತಾಲ್ಲೂಕಿನಲ್ಲಿ ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ನೀರು ಬರುತ್ತಿರಲಿಲ್ಲ. ಕೆಲವು ಗ್ರಾಮಗಳಲ್ಲಿ ಅಂತರ್ಜಲದ ಕೊರತೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆ ಅದನ್ನು ನಿವಾರಿಸಿದೆ.


ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇರುವ ಹಿರಿಕೆರೆ ಹಾಗೂ ದೊಡ್ಡ ಕೆರೆ ಮನಮೋಹಕವಾಗಿವೆ. ಕೆರೆಗಳು ತುಂಬಿದ ಪರಿಣಾಮ ರೈತರಿಗೆ, ಕುಡಿಯುವ ನೀರಿಗೆ ನೆರವಾಗಿದೆ. ಮುಂದಿನ ದಿನಗಳಲ್ಲಿ ಕೆರೆ ತುಂಬಿಸುವ ೋಂಜನೆ ಮೂಲಕ ಬರಗಾಲದಂತಹ ಸಮಯದಲ್ಲಿ ನೀರು ತುಂಬಿಸಿದರೆ ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗಲಿದೆ.
– ಎಚ್.ಎಂ.ನಂದೀಶ್, ಗ್ರಾ.ಪಂ ಸದಸ್ಯ ಹಾಗೂ ಪ್ರಗತಿಪರ ರೈತ


ಈ ಮೊದಲು ಬರಗಾಲವಿದ್ದಾಗ ಹಂಗಳ ಗ್ರಾಮ ದೊಡ್ಡ ಗ್ರಾಮವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಿತ್ತು. ಕೊಳವೆ ಬಾವಿಗಳು ಬರಿದಾಗಿದ್ದವು. ಇತ್ತೀಚಿನ ದಿನಗಳಲ್ಲಿ ಮಳೆಯಿಂದ ಹಂಗಳದ ಕೆರೆಗಳು ತುಂಬಿದ ಪರಿಣಾಮ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ.
-ಶಾಂತಮಲ್ಲಪ್ಪ, ಪಿಡಿಒ, ಹಂಗಳ

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

2 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

14 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

16 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

20 hours ago