ಜಿಲ್ಲೆಗಳು

ಗುಂಡ್ಲುಪೇಟೆ: ರಾಷ್ಟ್ರೀಯ ಮತದಾರ ದಿನಾಚರಣೆ

ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಜಿ.ಪಿ.ರಾಜರತ್ನಂ ಸಭಾಂಗಣದಲ್ಲಿ ಬುಧವಾರ 13ನೇ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಪಟ್ಟಣದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ತಳವಾರ್ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಮತದಾನವನ್ನು ಚಲಾಯಿಸುವ ಹಕ್ಕು ಹೊಂದಿರುವ ಪ್ರತಿಯೊಬ್ಬರೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಮಾಡುವ ಉದ್ದೇಶದಿಂದ 2011 ರಿಂದ ಪ್ರಾರಂಭಗೊಂಡಂತೆ ಈ ದಿನವನ್ನು ರಾಷ್ಟ್ರೀಯ ಮತದಾರರ ದಿನವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಯುವ ಮತದಾರರು ತಮ್ಮ ಜನಪ್ರತಿಯಾಗಿ ಯಾರು ಆಯ್ಕೆಯಾಗಬೇಕು  ಎಂಬುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಮತದಾನ ಮಾಡಬೇಕು. ಇಂದಿನ ಪೀಳಿಗೆ ಮತದಾನದ ಪ್ರಾಮುಖ್ಯತೆಯನ್ನು ಅರಿಯಬೇಕಾಗಿದೆ ಎಂದರು.

ತಾಲೂಕು ತಹಸಿಲ್ದಾರ್ ಸಿ.ಜಿ.ರವಿಶಂಕರ್ ಪ್ರತಿಜ್ಞಾವಿಧಿ ಬೋಧಿಸಿದರು. ಪಟ್ಟಣದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಕುಮಾರ್, ಅಪರ ಸಿವಿಲ್ ನ್ಯಾಯಾಧೀಶರಾದ ಕಾಂತಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ, ತಾಪಂ ಇಓ ಶ್ರೀಕಂಠ ರಾಜ ಅರಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ವಕೀಲರ ಸಂಘದ ಅಧ್ಯಕ್ಷರಾದ ವೆಂಕಟೇಶ್, ಅಧಿಕಾರಿಗಳು, ವಕೀಲರು, ಶಿಕ್ಷಕರು ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago