ಜಿಲ್ಲೆಗಳು

ಗುಂಡ್ಲುಪೇಟೆ: ರಾಷ್ಟ್ರೀಯ ಮತದಾರ ದಿನಾಚರಣೆ

ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಜಿ.ಪಿ.ರಾಜರತ್ನಂ ಸಭಾಂಗಣದಲ್ಲಿ ಬುಧವಾರ 13ನೇ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಪಟ್ಟಣದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ತಳವಾರ್ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಮತದಾನವನ್ನು ಚಲಾಯಿಸುವ ಹಕ್ಕು ಹೊಂದಿರುವ ಪ್ರತಿಯೊಬ್ಬರೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಮಾಡುವ ಉದ್ದೇಶದಿಂದ 2011 ರಿಂದ ಪ್ರಾರಂಭಗೊಂಡಂತೆ ಈ ದಿನವನ್ನು ರಾಷ್ಟ್ರೀಯ ಮತದಾರರ ದಿನವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಯುವ ಮತದಾರರು ತಮ್ಮ ಜನಪ್ರತಿಯಾಗಿ ಯಾರು ಆಯ್ಕೆಯಾಗಬೇಕು  ಎಂಬುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಮತದಾನ ಮಾಡಬೇಕು. ಇಂದಿನ ಪೀಳಿಗೆ ಮತದಾನದ ಪ್ರಾಮುಖ್ಯತೆಯನ್ನು ಅರಿಯಬೇಕಾಗಿದೆ ಎಂದರು.

ತಾಲೂಕು ತಹಸಿಲ್ದಾರ್ ಸಿ.ಜಿ.ರವಿಶಂಕರ್ ಪ್ರತಿಜ್ಞಾವಿಧಿ ಬೋಧಿಸಿದರು. ಪಟ್ಟಣದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಕುಮಾರ್, ಅಪರ ಸಿವಿಲ್ ನ್ಯಾಯಾಧೀಶರಾದ ಕಾಂತಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ, ತಾಪಂ ಇಓ ಶ್ರೀಕಂಠ ರಾಜ ಅರಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ವಕೀಲರ ಸಂಘದ ಅಧ್ಯಕ್ಷರಾದ ವೆಂಕಟೇಶ್, ಅಧಿಕಾರಿಗಳು, ವಕೀಲರು, ಶಿಕ್ಷಕರು ಹಾಜರಿದ್ದರು.

andolanait

Recent Posts

ಟ್ರಂಪ್‌ ಮೇಲಿನ ದಾಳಿ ಇದೇ ಮೊದಲೇನಲ್ಲ ; ಈ ಹಿಂದೆಯೂ ನಡೆದಿತ್ತು ಹತ್ಯೆಗೆ ಯತ್ನ !

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ  ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್‌ನ ಘಟನೆ…

16 mins ago

ಛಡ್ಡಾ ಬಿಜೆಪಿ ಸೇರ್ಪಡೆ ; ಜೆನ್-ಝೀಗಳಿಂದ ಅನ್‌ಫಾಲೋ ಅಭಿಯಾನ

ನವದೆಹಲಿ : ರಾಜ್ಯಸಭಾ ಸಂಸದ ರಾಘವ್‌ ಛಡ್ಡಾ ಅವರು ಎಎಪಿ(ಆಮ್‌ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…

30 mins ago

ಮೇ.2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಹೈ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್…

45 mins ago

ಓದುಗರ ಪತ್ರ | ಸಿಇಟಿ ; ನಿಯಮಗಳಿಗೆ ತಿದ್ದುಪಡಿ ಅವಶ್ಯ

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಸೋಲಾದದ್ದು ಮುಚ್ಚುಮರೆಯ ಕ್ಷೇತ್ರ ಪುನರ್‌ ವಿಂಗಡಣೆಗೆ

ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…

2 hours ago

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…

2 hours ago