ಜಿಲ್ಲೆಗಳು

ಗುಂಡ್ಲುಪೇಟೆ : ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಪ್ರತಿಭಟನೆ

ಗುಂಡ್ಲುಪೇಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು, ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ತಾಲ್ಲೂಕು ಕಚೇರಿಗೆ ಬಂದು ಸಮಾವೇಶಗೊಂಡು ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ವಜಾ ಮಾಡಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ತಹಸಿಲ್ದಾರ್ ರವಿಶಂಕರ್ ಮೂಲಕ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು, ತಾ.ಪಂ. ಮಾಜಿ ಅಧ್ಯಕ್ಷ ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ಮೃತ್ಯುಂಜಯ, ಪುರಸಭೆ ಸದಸ್ಯ ನಾ.ಕುಮಾರ್, ಎಪಿಎಂಸಿ ನಿರ್ದೇಶಕರಾದ ಮೊಳ್ಳಯ್ಯನಹುಂಡಿ ಬಸವರಾಜಪ್ಪ, ವಿರೂಪಾಕ್ಷ, ಜಿ.ಕೆ.ಎನ್.ವಿಶ್ವ, ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್, ಟೌನ್ ಅಧ್ಯಕ್ಷ ಅರುಣ್ ಚಿಟ್ಟೆ, ಬೇಗೂರು ಬ್ಲಾಕ್ ಅಧ್ಯಕ್ಷ ಮೋಹನ್ ದಾಸ್, ಮಂಜು ಶಿವಪುರ, ಮಡಹಳ್ಳಿ ಮಣಿ, ಮಾಡ್ರಹಳ್ಳಿ ನವೀನ್, ಮಳವಳ್ಳಿ ಅಭಿ, ಲೋಕಿ ಗೋಪಾಲಪುರ ಮತ್ತಿತರರು ಹಾಜರಿದ್ದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 21 ಮಂಗಳವಾರ  

36 mins ago

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

10 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

11 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

11 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

12 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

12 hours ago