ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಂದಿದ್ದ ಚಿತ್ರದುರ್ಗ ಮೂಲದ ವ್ಯಕ್ತಿ ಒಬ್ಬರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಸಿಗದೆ ಪಟ್ಟಿರುವ ಘಟನೆ ನಡೆದಿದೆ.
ಚಿತ್ರದುರ್ಗ ಮೂಲದ 32 ವರ್ಷದ ಅನಿಲ್ ಎಂಬ ವ್ಯಕ್ತಿಯೇ ಮೃತಪಟ್ಟವರು. ಅನಿಲ್ ಅವರು ತಮ್ಮ ಕುಟುಂಬದೊಟ್ಟಿಗೆ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ದರ್ಶನವನ್ನು ಮುಗಿಸಿ ವಾಪಸಾಗುತ್ತಿದ್ದ ವೇಳೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಈ ವೇಳೆ ಅವರನ್ನು ಆಂಬುಲೆನ್ಸ್ ಮೂಲಕ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದ ಕಾರಣ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಜಯದೇವ ಆಸ್ಪತ್ರೆಗೆ ಕಳುಹಿಸಲು ಮುಂದಾಗಿದ್ದಾರೆ ಈ ವೇಳೆ ಅನಿಲ್ ಅವರು ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಆರೋಪಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಂಜುನಾಥ್ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಅನಿಲ್ ಅವರ ಪತ್ನಿ ಮತ್ತು ಆರೋಪವನ್ನು ತಳ್ಳಿಹಾಕಿದ್ದು. ಮೃತಪಟ್ಟ ಅನಿಲ್ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿದ್ದು. ಆಕ್ಸಿಜನ್ ಕೊಟ್ಟು ಅವರನ್ನು ಮೈಸೂರಿಗೆ ಕಳುಹಿಸುವ ಸಂದರ್ಭದಲ್ಲಿ ಹೃದಯಘಾತವಾಗಿದ್ದು ಮತ್ತೆ ಒಳಗೆ ಕರೆದು ಚಿಕಿತ್ಸೆ ನೀಡಿದರು ಪ್ರಯೋಜನವಾಗಲಿಲ್ಲ. ಅವರ ಸಾವಿಗೆ ಆಕ್ಸಿಜನ್ ಕಾರಣವಲ್ಲ ಎಂದು ಹೇಳಿದ್ದಾರೆ.
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…