ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಂದಿದ್ದ ಚಿತ್ರದುರ್ಗ ಮೂಲದ ವ್ಯಕ್ತಿ ಒಬ್ಬರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಸಿಗದೆ ಪಟ್ಟಿರುವ ಘಟನೆ ನಡೆದಿದೆ.
ಚಿತ್ರದುರ್ಗ ಮೂಲದ 32 ವರ್ಷದ ಅನಿಲ್ ಎಂಬ ವ್ಯಕ್ತಿಯೇ ಮೃತಪಟ್ಟವರು. ಅನಿಲ್ ಅವರು ತಮ್ಮ ಕುಟುಂಬದೊಟ್ಟಿಗೆ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ದರ್ಶನವನ್ನು ಮುಗಿಸಿ ವಾಪಸಾಗುತ್ತಿದ್ದ ವೇಳೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಈ ವೇಳೆ ಅವರನ್ನು ಆಂಬುಲೆನ್ಸ್ ಮೂಲಕ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದ ಕಾರಣ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಜಯದೇವ ಆಸ್ಪತ್ರೆಗೆ ಕಳುಹಿಸಲು ಮುಂದಾಗಿದ್ದಾರೆ ಈ ವೇಳೆ ಅನಿಲ್ ಅವರು ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಆರೋಪಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಂಜುನಾಥ್ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಅನಿಲ್ ಅವರ ಪತ್ನಿ ಮತ್ತು ಆರೋಪವನ್ನು ತಳ್ಳಿಹಾಕಿದ್ದು. ಮೃತಪಟ್ಟ ಅನಿಲ್ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿದ್ದು. ಆಕ್ಸಿಜನ್ ಕೊಟ್ಟು ಅವರನ್ನು ಮೈಸೂರಿಗೆ ಕಳುಹಿಸುವ ಸಂದರ್ಭದಲ್ಲಿ ಹೃದಯಘಾತವಾಗಿದ್ದು ಮತ್ತೆ ಒಳಗೆ ಕರೆದು ಚಿಕಿತ್ಸೆ ನೀಡಿದರು ಪ್ರಯೋಜನವಾಗಲಿಲ್ಲ. ಅವರ ಸಾವಿಗೆ ಆಕ್ಸಿಜನ್ ಕಾರಣವಲ್ಲ ಎಂದು ಹೇಳಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…