ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್ ಜೋಡೊ ಯಾತ್ರೆಯು ನಾಳೆ (30-09-2022) ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಪ್ರಣಯ್ ಅವರು ಫ್ಲೆಕ್ಸ್ಗಳಿಗೆ ಬ್ಲೇಡ್ ಹಾಕಿರುವ ಸಂಬಂಧ ದೂರು ದಾಖಲಾಗಿರವುದರ ಕುರಿತು ಪೊಲೀಸಿನವರು ಕ್ರಮ ಕೈಗೊಂಡು ಕಿಡಿಗೇಡಿಗಳನ್ನು ಬಂಧಿಸುತ್ತಾರೆ, ಅವರ ಮೇಲೆ ಸೂಕ್ತ ಕಾನೂಕು ಕ್ರಮಗಳನ್ನು ಕೈಗೊಳ್ಳುತ್ತಾರೆ, ಅಂತಹ ಹೇಯ ಹಾಗೂ ಲಜ್ಜೆಗೆಟ್ಟ ಕೆಲಸವನ್ನು ಸಾಮಾನ್ಯ ಕಾರ್ಯಕರ್ತರು ಮಾಡುವುದಿಲ್ಲ. ಫ್ಲೆಕ್ಸ್ಗಳನ್ನು ಹರಿದು ಹಾಕಿರುವ ಕೆಲಸ ಯಾರೇ ಮಾಡಿದರು ಅದು ತಪ್ಪು ಅಂತವರಿಗೆ ಶಿಕ್ಷೆಯಾಗಲಿ,ಅದು ಬಿಟ್ಟು ಆರೋಪವನ್ನು ಮಾಡುವುದು, ಕುಮ್ಮಕ್ಕು ಮಾಡುತ್ತಿದ್ದಾರೆನ್ನುವುದು ತಪ್ಪು, ನನ್ನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಮತ್ತು ಉಳಿಸುವ ಬಗ್ಗೆ ನನ್ನ ಪಕ್ಷ ತೀರ್ಮಾನ ಮಾಡುತ್ತದೆ. ಅದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…