ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್ ಜೋಡೊ ಯಾತ್ರೆಯು ನಾಳೆ (30-09-2022) ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಪ್ರಣಯ್ ಅವರು ಫ್ಲೆಕ್ಸ್ಗಳಿಗೆ ಬ್ಲೇಡ್ ಹಾಕಿರುವ ಸಂಬಂಧ ದೂರು ದಾಖಲಾಗಿರವುದರ ಕುರಿತು ಪೊಲೀಸಿನವರು ಕ್ರಮ ಕೈಗೊಂಡು ಕಿಡಿಗೇಡಿಗಳನ್ನು ಬಂಧಿಸುತ್ತಾರೆ, ಅವರ ಮೇಲೆ ಸೂಕ್ತ ಕಾನೂಕು ಕ್ರಮಗಳನ್ನು ಕೈಗೊಳ್ಳುತ್ತಾರೆ, ಅಂತಹ ಹೇಯ ಹಾಗೂ ಲಜ್ಜೆಗೆಟ್ಟ ಕೆಲಸವನ್ನು ಸಾಮಾನ್ಯ ಕಾರ್ಯಕರ್ತರು ಮಾಡುವುದಿಲ್ಲ. ಫ್ಲೆಕ್ಸ್ಗಳನ್ನು ಹರಿದು ಹಾಕಿರುವ ಕೆಲಸ ಯಾರೇ ಮಾಡಿದರು ಅದು ತಪ್ಪು ಅಂತವರಿಗೆ ಶಿಕ್ಷೆಯಾಗಲಿ,ಅದು ಬಿಟ್ಟು ಆರೋಪವನ್ನು ಮಾಡುವುದು, ಕುಮ್ಮಕ್ಕು ಮಾಡುತ್ತಿದ್ದಾರೆನ್ನುವುದು ತಪ್ಪು, ನನ್ನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಮತ್ತು ಉಳಿಸುವ ಬಗ್ಗೆ ನನ್ನ ಪಕ್ಷ ತೀರ್ಮಾನ ಮಾಡುತ್ತದೆ. ಅದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ…
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.…
ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ…
ಬೆಂಗಳೂರು: ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಪ್ರವಾಸಿ ತಾಣಗಳು ಜನ ಜಂಗುಳಿಯಿಂದ ತುಂಬಿ…
ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದು,…