ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್ ಜೋಡೊ ಯಾತ್ರೆಯು ನಾಳೆ (30-09-2022) ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಪ್ರಣಯ್ ಅವರು ಫ್ಲೆಕ್ಸ್ಗಳಿಗೆ ಬ್ಲೇಡ್ ಹಾಕಿರುವ ಸಂಬಂಧ ದೂರು ದಾಖಲಾಗಿರವುದರ ಕುರಿತು ಪೊಲೀಸಿನವರು ಕ್ರಮ ಕೈಗೊಂಡು ಕಿಡಿಗೇಡಿಗಳನ್ನು ಬಂಧಿಸುತ್ತಾರೆ, ಅವರ ಮೇಲೆ ಸೂಕ್ತ ಕಾನೂಕು ಕ್ರಮಗಳನ್ನು ಕೈಗೊಳ್ಳುತ್ತಾರೆ, ಅಂತಹ ಹೇಯ ಹಾಗೂ ಲಜ್ಜೆಗೆಟ್ಟ ಕೆಲಸವನ್ನು ಸಾಮಾನ್ಯ ಕಾರ್ಯಕರ್ತರು ಮಾಡುವುದಿಲ್ಲ. ಫ್ಲೆಕ್ಸ್ಗಳನ್ನು ಹರಿದು ಹಾಕಿರುವ ಕೆಲಸ ಯಾರೇ ಮಾಡಿದರು ಅದು ತಪ್ಪು ಅಂತವರಿಗೆ ಶಿಕ್ಷೆಯಾಗಲಿ,ಅದು ಬಿಟ್ಟು ಆರೋಪವನ್ನು ಮಾಡುವುದು, ಕುಮ್ಮಕ್ಕು ಮಾಡುತ್ತಿದ್ದಾರೆನ್ನುವುದು ತಪ್ಪು, ನನ್ನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಮತ್ತು ಉಳಿಸುವ ಬಗ್ಗೆ ನನ್ನ ಪಕ್ಷ ತೀರ್ಮಾನ ಮಾಡುತ್ತದೆ. ಅದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…