ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್ ಜೋಡೊ ಯಾತ್ರೆಯು ನಾಳೆ (30-09-2022) ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಪ್ರಣಯ್ ಅವರು ಫ್ಲೆಕ್ಸ್ಗಳಿಗೆ ಬ್ಲೇಡ್ ಹಾಕಿರುವ ಸಂಬಂಧ ದೂರು ದಾಖಲಾಗಿರವುದರ ಕುರಿತು ಪೊಲೀಸಿನವರು ಕ್ರಮ ಕೈಗೊಂಡು ಕಿಡಿಗೇಡಿಗಳನ್ನು ಬಂಧಿಸುತ್ತಾರೆ, ಅವರ ಮೇಲೆ ಸೂಕ್ತ ಕಾನೂಕು ಕ್ರಮಗಳನ್ನು ಕೈಗೊಳ್ಳುತ್ತಾರೆ, ಅಂತಹ ಹೇಯ ಹಾಗೂ ಲಜ್ಜೆಗೆಟ್ಟ ಕೆಲಸವನ್ನು ಸಾಮಾನ್ಯ ಕಾರ್ಯಕರ್ತರು ಮಾಡುವುದಿಲ್ಲ. ಫ್ಲೆಕ್ಸ್ಗಳನ್ನು ಹರಿದು ಹಾಕಿರುವ ಕೆಲಸ ಯಾರೇ ಮಾಡಿದರು ಅದು ತಪ್ಪು ಅಂತವರಿಗೆ ಶಿಕ್ಷೆಯಾಗಲಿ,ಅದು ಬಿಟ್ಟು ಆರೋಪವನ್ನು ಮಾಡುವುದು, ಕುಮ್ಮಕ್ಕು ಮಾಡುತ್ತಿದ್ದಾರೆನ್ನುವುದು ತಪ್ಪು, ನನ್ನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಮತ್ತು ಉಳಿಸುವ ಬಗ್ಗೆ ನನ್ನ ಪಕ್ಷ ತೀರ್ಮಾನ ಮಾಡುತ್ತದೆ. ಅದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…