ಕೆಲಸಕ್ಕೆ ಮರಳಿದ ಕಸ ಸಂಗ್ರಹ ವಾಹನ ಚಾಲಕರು
ಎಚ್.ಡಿ.ಕೋಟೆ: ಅಧಿಕಾರಿಗಳು ಮತ್ತು ಚಾಲಕರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ಪುರಸಭೆ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಅಂತ್ಯ ಹಾಡಿದ್ದು, ೩ ದಿನಗಳಿಂದ ಸ್ಥಗಿತಗೊಂಡಿದ್ದ ಮನೆಮನೆ ಕಸ ಸಂಗ್ರಹಿಸುವ ವಾಹನಗಳನ್ನು ಚಾಲನೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುರಸಭೆಯಲ್ಲಿ ಟೆಂಡರ್ ಮೂಲಕ ಕೆಲಸ ನಿರ್ವಹಿಸುವ ಚಾಲಕರಿಗೆ ಕೆಲ ಅಧಿಕಾರಿಗಳು ನಿಂದಿಸುತ್ತಾರೆ ಎಂದು ಆರೋಪಿಸಿ ವಾಹನಗಳ ಕೀಗಳನ್ನು ಹಿಂತಿರುಗಿಸಿ ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಹಾಜರಾಗಿರಲಿಲ್ಲ. ಇದರಿಂದ ಮನೆಗಳಲ್ಲಿ ಕಸ ವಿಲೇವಾರಿಯಾಗದೆ ಸಮಸ್ಯೆ ಉಂಟಾಗಿತ್ತು. ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯರಾದ ಮಿಲ್ ನಾಗರಾಜು, ಲೋಕೇಶ್ ಅವರು ಸ್ವತಃ ವಾಹನಗಳನ್ನು ಚಾಲನೆ ಮಾಡಿ ಮನೆಗಳಲ್ಲಿ ಕಸವನ್ನು ಸಂಗ್ರಹಿಸಿದ್ದರು.
ಪರಿಸ್ಥಿತಿ ಹದಗೆಟ್ಟಿದ್ದರಿಂದ ಪುರಸಭಾ ಅಧ್ಯಕ್ಷರಾದ ಅನಿತಾ ನಿಂಗನಾಯಕ, ಮುಖ್ಯಾಧಿಕಾರಿ ಸುರೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್ ಸೇರಿದಂತೆ ಇನ್ನಿತರ ಸದಸ್ಯರು ಅಧಿಕಾರಿಗಳು ಮತ್ತು ಚಾಲಕರ ಜತೆ ಚರ್ಚೆ ನಡೆಸಿದರಲ್ಲದೆ, ಅಧಿಕಾರಿಗಳು ಏನೇ ತಪ್ಪು ಮಾಡಿದರೂ ನಮ್ಮ ಗಮನಕ್ಕೆ ತನ್ನಿ. ಏಕಾಏಕಿ ಈ ರೀತಿ ನಿರ್ಧಾರ ಕೈಗೊಂಡರೆ ಸಮಸ್ಯೆಯಾಗುತ್ತದೆ. ಏನೇ ಸಮಸ್ಯೆಗಳಿದ್ದರೂ ಬಗೆಹರಿಸೋಣ. ಅಧಿಕಾರಿಗಳ ವರ್ತನೆ ವಿಚಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹಾಗಾಗಿ ಎಲ್ಲ ಚಾಲಕರು ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.
* ಅಧಿಕಾರಿಗಳು ವಿನಾಕಾರಣ ನಿಂದಿಸುತ್ತಾರೆಂದು ಆರೋಪಿಸಿ ೩ ದಿನಗಳಿಂದ ಕಸ ಸಂಗ್ರಹ ಕಾರ್ಯ ಸ್ಥಗಿತಗೊಳಿಸಿದ್ದ ಚಾಲಕರು
* ಭಾನುವಾರ ಪುರಸಭೆ ಸದಸ್ಯರೇ ವಾಹನ ಚಲಾಯಿಸಿ ಕಸ ಸಂಗ್ರಹಿಸಿದ್ದರು
ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ…
ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…
ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…
ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…