ಜಿಲ್ಲೆಗಳು

ಕೋಟೆ ಕಸ ಕಸಿವಿಸಿಗೆ ತೆರೆ

ಕೆಲಸಕ್ಕೆ ಮರಳಿದ ಕಸ ಸಂಗ್ರಹ ವಾಹನ ಚಾಲಕರು

ಎಚ್.ಡಿ.ಕೋಟೆ: ಅಧಿಕಾರಿಗಳು ಮತ್ತು ಚಾಲಕರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ಪುರಸಭೆ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಅಂತ್ಯ ಹಾಡಿದ್ದು, ೩ ದಿನಗಳಿಂದ ಸ್ಥಗಿತಗೊಂಡಿದ್ದ ಮನೆಮನೆ ಕಸ ಸಂಗ್ರಹಿಸುವ ವಾಹನಗಳನ್ನು ಚಾಲನೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುರಸಭೆಯಲ್ಲಿ ಟೆಂಡರ್ ಮೂಲಕ ಕೆಲಸ ನಿರ್ವಹಿಸುವ ಚಾಲಕರಿಗೆ ಕೆಲ ಅಧಿಕಾರಿಗಳು ನಿಂದಿಸುತ್ತಾರೆ ಎಂದು ಆರೋಪಿಸಿ ವಾಹನಗಳ ಕೀಗಳನ್ನು ಹಿಂತಿರುಗಿಸಿ ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಹಾಜರಾಗಿರಲಿಲ್ಲ. ಇದರಿಂದ ಮನೆಗಳಲ್ಲಿ ಕಸ ವಿಲೇವಾರಿಯಾಗದೆ ಸಮಸ್ಯೆ ಉಂಟಾಗಿತ್ತು. ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯರಾದ ಮಿಲ್ ನಾಗರಾಜು, ಲೋಕೇಶ್ ಅವರು ಸ್ವತಃ ವಾಹನಗಳನ್ನು ಚಾಲನೆ ಮಾಡಿ ಮನೆಗಳಲ್ಲಿ ಕಸವನ್ನು ಸಂಗ್ರಹಿಸಿದ್ದರು.

ಪರಿಸ್ಥಿತಿ ಹದಗೆಟ್ಟಿದ್ದರಿಂದ ಪುರಸಭಾ ಅಧ್ಯಕ್ಷರಾದ ಅನಿತಾ ನಿಂಗನಾಯಕ, ಮುಖ್ಯಾಧಿಕಾರಿ ಸುರೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್ ಸೇರಿದಂತೆ ಇನ್ನಿತರ ಸದಸ್ಯರು ಅಧಿಕಾರಿಗಳು ಮತ್ತು ಚಾಲಕರ ಜತೆ ಚರ್ಚೆ ನಡೆಸಿದರಲ್ಲದೆ, ಅಧಿಕಾರಿಗಳು ಏನೇ ತಪ್ಪು ಮಾಡಿದರೂ ನಮ್ಮ ಗಮನಕ್ಕೆ ತನ್ನಿ. ಏಕಾಏಕಿ ಈ ರೀತಿ ನಿರ್ಧಾರ ಕೈಗೊಂಡರೆ ಸಮಸ್ಯೆಯಾಗುತ್ತದೆ. ಏನೇ ಸಮಸ್ಯೆಗಳಿದ್ದರೂ ಬಗೆಹರಿಸೋಣ. ಅಧಿಕಾರಿಗಳ ವರ್ತನೆ ವಿಚಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹಾಗಾಗಿ ಎಲ್ಲ ಚಾಲಕರು ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.

* ಅಧಿಕಾರಿಗಳು ವಿನಾಕಾರಣ ನಿಂದಿಸುತ್ತಾರೆಂದು ಆರೋಪಿಸಿ ೩ ದಿನಗಳಿಂದ ಕಸ ಸಂಗ್ರಹ ಕಾರ್ಯ ಸ್ಥಗಿತಗೊಳಿಸಿದ್ದ ಚಾಲಕರು

* ಭಾನುವಾರ ಪುರಸಭೆ ಸದಸ್ಯರೇ ವಾಹನ ಚಲಾಯಿಸಿ ಕಸ ಸಂಗ್ರಹಿಸಿದ್ದರು

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

1 min ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

29 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago