ಜಿಲ್ಲೆಗಳು

ಕೋಟೆ ಕಸ ಕಸಿವಿಸಿಗೆ ತೆರೆ

ಕೆಲಸಕ್ಕೆ ಮರಳಿದ ಕಸ ಸಂಗ್ರಹ ವಾಹನ ಚಾಲಕರು

ಎಚ್.ಡಿ.ಕೋಟೆ: ಅಧಿಕಾರಿಗಳು ಮತ್ತು ಚಾಲಕರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ಪುರಸಭೆ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಅಂತ್ಯ ಹಾಡಿದ್ದು, ೩ ದಿನಗಳಿಂದ ಸ್ಥಗಿತಗೊಂಡಿದ್ದ ಮನೆಮನೆ ಕಸ ಸಂಗ್ರಹಿಸುವ ವಾಹನಗಳನ್ನು ಚಾಲನೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುರಸಭೆಯಲ್ಲಿ ಟೆಂಡರ್ ಮೂಲಕ ಕೆಲಸ ನಿರ್ವಹಿಸುವ ಚಾಲಕರಿಗೆ ಕೆಲ ಅಧಿಕಾರಿಗಳು ನಿಂದಿಸುತ್ತಾರೆ ಎಂದು ಆರೋಪಿಸಿ ವಾಹನಗಳ ಕೀಗಳನ್ನು ಹಿಂತಿರುಗಿಸಿ ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಹಾಜರಾಗಿರಲಿಲ್ಲ. ಇದರಿಂದ ಮನೆಗಳಲ್ಲಿ ಕಸ ವಿಲೇವಾರಿಯಾಗದೆ ಸಮಸ್ಯೆ ಉಂಟಾಗಿತ್ತು. ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯರಾದ ಮಿಲ್ ನಾಗರಾಜು, ಲೋಕೇಶ್ ಅವರು ಸ್ವತಃ ವಾಹನಗಳನ್ನು ಚಾಲನೆ ಮಾಡಿ ಮನೆಗಳಲ್ಲಿ ಕಸವನ್ನು ಸಂಗ್ರಹಿಸಿದ್ದರು.

ಪರಿಸ್ಥಿತಿ ಹದಗೆಟ್ಟಿದ್ದರಿಂದ ಪುರಸಭಾ ಅಧ್ಯಕ್ಷರಾದ ಅನಿತಾ ನಿಂಗನಾಯಕ, ಮುಖ್ಯಾಧಿಕಾರಿ ಸುರೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್ ಸೇರಿದಂತೆ ಇನ್ನಿತರ ಸದಸ್ಯರು ಅಧಿಕಾರಿಗಳು ಮತ್ತು ಚಾಲಕರ ಜತೆ ಚರ್ಚೆ ನಡೆಸಿದರಲ್ಲದೆ, ಅಧಿಕಾರಿಗಳು ಏನೇ ತಪ್ಪು ಮಾಡಿದರೂ ನಮ್ಮ ಗಮನಕ್ಕೆ ತನ್ನಿ. ಏಕಾಏಕಿ ಈ ರೀತಿ ನಿರ್ಧಾರ ಕೈಗೊಂಡರೆ ಸಮಸ್ಯೆಯಾಗುತ್ತದೆ. ಏನೇ ಸಮಸ್ಯೆಗಳಿದ್ದರೂ ಬಗೆಹರಿಸೋಣ. ಅಧಿಕಾರಿಗಳ ವರ್ತನೆ ವಿಚಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹಾಗಾಗಿ ಎಲ್ಲ ಚಾಲಕರು ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.

* ಅಧಿಕಾರಿಗಳು ವಿನಾಕಾರಣ ನಿಂದಿಸುತ್ತಾರೆಂದು ಆರೋಪಿಸಿ ೩ ದಿನಗಳಿಂದ ಕಸ ಸಂಗ್ರಹ ಕಾರ್ಯ ಸ್ಥಗಿತಗೊಳಿಸಿದ್ದ ಚಾಲಕರು

* ಭಾನುವಾರ ಪುರಸಭೆ ಸದಸ್ಯರೇ ವಾಹನ ಚಲಾಯಿಸಿ ಕಸ ಸಂಗ್ರಹಿಸಿದ್ದರು

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago