ಕೆಲಸಕ್ಕೆ ಮರಳಿದ ಕಸ ಸಂಗ್ರಹ ವಾಹನ ಚಾಲಕರು
ಎಚ್.ಡಿ.ಕೋಟೆ: ಅಧಿಕಾರಿಗಳು ಮತ್ತು ಚಾಲಕರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ಪುರಸಭೆ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಅಂತ್ಯ ಹಾಡಿದ್ದು, ೩ ದಿನಗಳಿಂದ ಸ್ಥಗಿತಗೊಂಡಿದ್ದ ಮನೆಮನೆ ಕಸ ಸಂಗ್ರಹಿಸುವ ವಾಹನಗಳನ್ನು ಚಾಲನೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುರಸಭೆಯಲ್ಲಿ ಟೆಂಡರ್ ಮೂಲಕ ಕೆಲಸ ನಿರ್ವಹಿಸುವ ಚಾಲಕರಿಗೆ ಕೆಲ ಅಧಿಕಾರಿಗಳು ನಿಂದಿಸುತ್ತಾರೆ ಎಂದು ಆರೋಪಿಸಿ ವಾಹನಗಳ ಕೀಗಳನ್ನು ಹಿಂತಿರುಗಿಸಿ ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಹಾಜರಾಗಿರಲಿಲ್ಲ. ಇದರಿಂದ ಮನೆಗಳಲ್ಲಿ ಕಸ ವಿಲೇವಾರಿಯಾಗದೆ ಸಮಸ್ಯೆ ಉಂಟಾಗಿತ್ತು. ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯರಾದ ಮಿಲ್ ನಾಗರಾಜು, ಲೋಕೇಶ್ ಅವರು ಸ್ವತಃ ವಾಹನಗಳನ್ನು ಚಾಲನೆ ಮಾಡಿ ಮನೆಗಳಲ್ಲಿ ಕಸವನ್ನು ಸಂಗ್ರಹಿಸಿದ್ದರು.
ಪರಿಸ್ಥಿತಿ ಹದಗೆಟ್ಟಿದ್ದರಿಂದ ಪುರಸಭಾ ಅಧ್ಯಕ್ಷರಾದ ಅನಿತಾ ನಿಂಗನಾಯಕ, ಮುಖ್ಯಾಧಿಕಾರಿ ಸುರೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್ ಸೇರಿದಂತೆ ಇನ್ನಿತರ ಸದಸ್ಯರು ಅಧಿಕಾರಿಗಳು ಮತ್ತು ಚಾಲಕರ ಜತೆ ಚರ್ಚೆ ನಡೆಸಿದರಲ್ಲದೆ, ಅಧಿಕಾರಿಗಳು ಏನೇ ತಪ್ಪು ಮಾಡಿದರೂ ನಮ್ಮ ಗಮನಕ್ಕೆ ತನ್ನಿ. ಏಕಾಏಕಿ ಈ ರೀತಿ ನಿರ್ಧಾರ ಕೈಗೊಂಡರೆ ಸಮಸ್ಯೆಯಾಗುತ್ತದೆ. ಏನೇ ಸಮಸ್ಯೆಗಳಿದ್ದರೂ ಬಗೆಹರಿಸೋಣ. ಅಧಿಕಾರಿಗಳ ವರ್ತನೆ ವಿಚಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹಾಗಾಗಿ ಎಲ್ಲ ಚಾಲಕರು ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.
* ಅಧಿಕಾರಿಗಳು ವಿನಾಕಾರಣ ನಿಂದಿಸುತ್ತಾರೆಂದು ಆರೋಪಿಸಿ ೩ ದಿನಗಳಿಂದ ಕಸ ಸಂಗ್ರಹ ಕಾರ್ಯ ಸ್ಥಗಿತಗೊಳಿಸಿದ್ದ ಚಾಲಕರು
* ಭಾನುವಾರ ಪುರಸಭೆ ಸದಸ್ಯರೇ ವಾಹನ ಚಲಾಯಿಸಿ ಕಸ ಸಂಗ್ರಹಿಸಿದ್ದರು
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…